ಮೈಸೂರು : ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ವಾಹನ ಪರವಾನಗಿಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಕೇತಿಕವಾಗಿ ವಿತರಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿತರಿಸಿದ ಬಳಿಕ ಮಾತನಾಡಿದ ಸಚಿವರು ಗ್ರಾಮ ಪಂಚಾಯಿತಿಗಳಲ್ಲಿ 176 ಮಹಿಳೆಯರು ವಾಹನ ತರಬೇತಿ ಪಡೆದು, ಸ್ವಚ್ಚವಾಹಿನಿಗಳಲ್ಲಿ ಚಾಲಕ ವೃತ್ತಿ ಮಾಡುತ್ತಿರುವುದು ಸಂತೋಷದ ವಿಚಾರ. ಮಹಿಳಾ ಸಬಲೀಕರಣಕ್ಕೆ ಇದು ಉತ್ತೇಜನೆ ನೀಡಲಿದ್ದು, ಸ್ವಾಭಿಮಾನದಿಂದ ಬದುಕಲು ನೆರವಾಗಲಿದೆ ಎಂದು ಹೇಳಿದರು.
ಸ್ವಚ್ಛವಾಹಿನಿಯಲ್ಲಿ ಕೆಲಸ ಮಾಡುತ್ತೇವೆಂದು ಹಿಂಜರೆಯಬಾರದು. ಧರ್ಮ, ಜಾತಿ ಆಧಾರದಲ್ಲಿ ಕೀಳು ಅಭಿರುಚಿಯುಳ್ಳ ಜನರು ಅಣುಕಿಸುತ್ತಾರೆ. ಅದಕ್ಕೆಲ್ಲ ಧೃತಿಗೆಡದೆ ಆತ್ಮವಿಶ್ವಾಸದಿಂದ ಮನಸಾಕ್ಷಿ ಮೆಚ್ಚುವಂತೆ ಕೆಲಸ ಮಾಡಬೇಕು. ಇದು ಒಂದು ಉದ್ಯೋಗವಾಗಿ ಪರಿಗಣಿಸಿ ಎಂದು ಕಿವಿಮಾತು ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಹೆಚ್ಚು ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚು ಉದ್ಯೋಗವಕಾಶ ಕಲ್ಪಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಗ್ರಾಮಪಂಚಾಯಿತಿ ನೌಕರರಿಗೆ ಸಹಾಯಧನದ ಚಕ್ ವಿತರಿಸಿ, ಹಸು ಖರೀದಿಸಿ ಹೈನುಗಾರಿಕೆ ಮಾಡುವ ಮೂಲಕ ಜೀವನ ಕಟ್ಟಿಕೊಳ್ಳಬೇಕು. ಈ ಹಣವನ್ನು ಅನವಶ್ಯಕವಾಗಿ ಖರ್ಚು ಮಾಡಬಾರದು ಎಂದು ಸಲಹೆ ನೀಡಿದರು.
ಶಿಕ್ಷಣ ಫೌಂಡೇಶನ್ ವತಿಯಿಂದ ನೀಡಿದ ಟ್ಯಾಬ್ ಹಾಗೂ ಲ್ಯಾಪ್ಟಾಪ್ ಗಳನ್ನು ಗ್ರಂಥಾಲಯ (ಅರಿವು ಕೇಂದ್ರ)ಗಳಿಗೆ ನೀಡಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರು ಹೆಚ್ಚು ವಾಸಿಸುವ ಗ್ರಾಮಗಳಲ್ಲಿ ಸುಸಜ್ಜಿತ ಗ್ರಂಥಾಲಯ ತೆರೆಯಲು ಕ್ರಮ ವಹಿಸಿ ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ , ಉಪ ಕಾರ್ಯದರ್ಶಿ ಸವಿತಾ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…