ಮೈಸೂರು : ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ವಾಹನ ಪರವಾನಗಿಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಕೇತಿಕವಾಗಿ ವಿತರಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿತರಿಸಿದ ಬಳಿಕ ಮಾತನಾಡಿದ ಸಚಿವರು ಗ್ರಾಮ ಪಂಚಾಯಿತಿಗಳಲ್ಲಿ 176 ಮಹಿಳೆಯರು ವಾಹನ ತರಬೇತಿ ಪಡೆದು, ಸ್ವಚ್ಚವಾಹಿನಿಗಳಲ್ಲಿ ಚಾಲಕ ವೃತ್ತಿ ಮಾಡುತ್ತಿರುವುದು ಸಂತೋಷದ ವಿಚಾರ. ಮಹಿಳಾ ಸಬಲೀಕರಣಕ್ಕೆ ಇದು ಉತ್ತೇಜನೆ ನೀಡಲಿದ್ದು, ಸ್ವಾಭಿಮಾನದಿಂದ ಬದುಕಲು ನೆರವಾಗಲಿದೆ ಎಂದು ಹೇಳಿದರು.
ಸ್ವಚ್ಛವಾಹಿನಿಯಲ್ಲಿ ಕೆಲಸ ಮಾಡುತ್ತೇವೆಂದು ಹಿಂಜರೆಯಬಾರದು. ಧರ್ಮ, ಜಾತಿ ಆಧಾರದಲ್ಲಿ ಕೀಳು ಅಭಿರುಚಿಯುಳ್ಳ ಜನರು ಅಣುಕಿಸುತ್ತಾರೆ. ಅದಕ್ಕೆಲ್ಲ ಧೃತಿಗೆಡದೆ ಆತ್ಮವಿಶ್ವಾಸದಿಂದ ಮನಸಾಕ್ಷಿ ಮೆಚ್ಚುವಂತೆ ಕೆಲಸ ಮಾಡಬೇಕು. ಇದು ಒಂದು ಉದ್ಯೋಗವಾಗಿ ಪರಿಗಣಿಸಿ ಎಂದು ಕಿವಿಮಾತು ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಹೆಚ್ಚು ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚು ಉದ್ಯೋಗವಕಾಶ ಕಲ್ಪಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಗ್ರಾಮಪಂಚಾಯಿತಿ ನೌಕರರಿಗೆ ಸಹಾಯಧನದ ಚಕ್ ವಿತರಿಸಿ, ಹಸು ಖರೀದಿಸಿ ಹೈನುಗಾರಿಕೆ ಮಾಡುವ ಮೂಲಕ ಜೀವನ ಕಟ್ಟಿಕೊಳ್ಳಬೇಕು. ಈ ಹಣವನ್ನು ಅನವಶ್ಯಕವಾಗಿ ಖರ್ಚು ಮಾಡಬಾರದು ಎಂದು ಸಲಹೆ ನೀಡಿದರು.
ಶಿಕ್ಷಣ ಫೌಂಡೇಶನ್ ವತಿಯಿಂದ ನೀಡಿದ ಟ್ಯಾಬ್ ಹಾಗೂ ಲ್ಯಾಪ್ಟಾಪ್ ಗಳನ್ನು ಗ್ರಂಥಾಲಯ (ಅರಿವು ಕೇಂದ್ರ)ಗಳಿಗೆ ನೀಡಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರು ಹೆಚ್ಚು ವಾಸಿಸುವ ಗ್ರಾಮಗಳಲ್ಲಿ ಸುಸಜ್ಜಿತ ಗ್ರಂಥಾಲಯ ತೆರೆಯಲು ಕ್ರಮ ವಹಿಸಿ ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ , ಉಪ ಕಾರ್ಯದರ್ಶಿ ಸವಿತಾ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…