ಮೈಸೂರು : ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ವಾಹನ ಪರವಾನಗಿಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಕೇತಿಕವಾಗಿ ವಿತರಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿತರಿಸಿದ ಬಳಿಕ ಮಾತನಾಡಿದ ಸಚಿವರು ಗ್ರಾಮ ಪಂಚಾಯಿತಿಗಳಲ್ಲಿ 176 ಮಹಿಳೆಯರು ವಾಹನ ತರಬೇತಿ ಪಡೆದು, ಸ್ವಚ್ಚವಾಹಿನಿಗಳಲ್ಲಿ ಚಾಲಕ ವೃತ್ತಿ ಮಾಡುತ್ತಿರುವುದು ಸಂತೋಷದ ವಿಚಾರ. ಮಹಿಳಾ ಸಬಲೀಕರಣಕ್ಕೆ ಇದು ಉತ್ತೇಜನೆ ನೀಡಲಿದ್ದು, ಸ್ವಾಭಿಮಾನದಿಂದ ಬದುಕಲು ನೆರವಾಗಲಿದೆ ಎಂದು ಹೇಳಿದರು.
ಸ್ವಚ್ಛವಾಹಿನಿಯಲ್ಲಿ ಕೆಲಸ ಮಾಡುತ್ತೇವೆಂದು ಹಿಂಜರೆಯಬಾರದು. ಧರ್ಮ, ಜಾತಿ ಆಧಾರದಲ್ಲಿ ಕೀಳು ಅಭಿರುಚಿಯುಳ್ಳ ಜನರು ಅಣುಕಿಸುತ್ತಾರೆ. ಅದಕ್ಕೆಲ್ಲ ಧೃತಿಗೆಡದೆ ಆತ್ಮವಿಶ್ವಾಸದಿಂದ ಮನಸಾಕ್ಷಿ ಮೆಚ್ಚುವಂತೆ ಕೆಲಸ ಮಾಡಬೇಕು. ಇದು ಒಂದು ಉದ್ಯೋಗವಾಗಿ ಪರಿಗಣಿಸಿ ಎಂದು ಕಿವಿಮಾತು ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಹೆಚ್ಚು ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚು ಉದ್ಯೋಗವಕಾಶ ಕಲ್ಪಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಗ್ರಾಮಪಂಚಾಯಿತಿ ನೌಕರರಿಗೆ ಸಹಾಯಧನದ ಚಕ್ ವಿತರಿಸಿ, ಹಸು ಖರೀದಿಸಿ ಹೈನುಗಾರಿಕೆ ಮಾಡುವ ಮೂಲಕ ಜೀವನ ಕಟ್ಟಿಕೊಳ್ಳಬೇಕು. ಈ ಹಣವನ್ನು ಅನವಶ್ಯಕವಾಗಿ ಖರ್ಚು ಮಾಡಬಾರದು ಎಂದು ಸಲಹೆ ನೀಡಿದರು.
ಶಿಕ್ಷಣ ಫೌಂಡೇಶನ್ ವತಿಯಿಂದ ನೀಡಿದ ಟ್ಯಾಬ್ ಹಾಗೂ ಲ್ಯಾಪ್ಟಾಪ್ ಗಳನ್ನು ಗ್ರಂಥಾಲಯ (ಅರಿವು ಕೇಂದ್ರ)ಗಳಿಗೆ ನೀಡಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರು ಹೆಚ್ಚು ವಾಸಿಸುವ ಗ್ರಾಮಗಳಲ್ಲಿ ಸುಸಜ್ಜಿತ ಗ್ರಂಥಾಲಯ ತೆರೆಯಲು ಕ್ರಮ ವಹಿಸಿ ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ , ಉಪ ಕಾರ್ಯದರ್ಶಿ ಸವಿತಾ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…