ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ
ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚು ಬಿಸಿಲಿನ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಟ ಕಡಿಮೆ ಮಾಡಬೇಕು. ದೇಹದ ನಿರ್ಜಲೀಕರಣ ಆಗದಂತೆ ಗಮನವಹಿಸಬೇಕು. ಜೊತೆಗೆ ಉಷ್ಣಾಂಶ ಹೆಚ್ಚಾದಾಗ ಕೆಲವು ತೊಂದರೆಗಳು ಆಗುತ್ತವೆ ಎಂದರು.
ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗಳಿಗೆ ಬೇಸಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೇ ದೇಹ ನಿರ್ಜಲೀಕರಣವಾದಾಗ ಮನೆಯಲ್ಲೇ ಓಆರ್ಎಸ್ ದ್ರಾವಣ ಹೇಗೆ ತಯಾರಿಸಬೇಕು ಎಂಬುದನ್ನು ಸಹ ಆಶಾ ಕಾರ್ಯಕರ್ತೆಯರು ಹೇಳಿಕೊಡುತ್ತಾರೆ. ಹೀಗಾಗಿ ಈ ನಿಟ್ಟಿನಲ್ಲಿ ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದು ಹೇಳಿದರು.
ಇನ್ನು ಸಾರ್ವಜನಿಕರು ಸಾಧ್ಯವಾದಷ್ಟು ನೀರು, ತಂಪು ಪಾನೀಯಗಳ ಸೇವಿಸಬೇಕು, ಮಾಂಸಹಾರ ಕಡಿಮೆ ಮಾಡಿ ಸಸ್ಯಹಾರವನ್ನೇ ಹೆಚ್ಚು ಬಳಸಬೇಕು. ರೈತರು ಹೊಲ ಗದ್ದೆಗಳಲ್ಲಿ ದುಡಿಯುವವರು ಮುಂಜಾನೆ ಹೋಗಿ 10.30,11 ಗಂಟೆ ಸಮಯಕ್ಕೆ ಮನೆಗೆ ಬಂದು ವಿರಮಿಸಬೇಕು. ಬಿಸಿಲ ತಾಪದಲ್ಲಿ ಕೆಲಸ ಮಾಡುವುದನ್ನು ಆದಷ್ಟು ಕಡಿಮೆ ಮಾಡಬೇಕು. ಬೇಸಿಗೆ ನಿರ್ವಹಣೆಗೆ ನಾವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ. ಹಾಗಾಗಿ ಕೈಪಿಡಿಗಳು ಮತ್ತು ಪೋಸ್ಟರ್ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ. ಅದರೊಂದಿಗೆ ಜಿಲ್ಲಾ ಮಟ್ಟದಲ್ಲೂ ವೈದ್ಯರಿಗೆ ಬೇಸಿಗೆ ಸಂಧರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರತ್ಯೇಕ ಸಭೆ ಮಾಡಿ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…