ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ
ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚು ಬಿಸಿಲಿನ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಟ ಕಡಿಮೆ ಮಾಡಬೇಕು. ದೇಹದ ನಿರ್ಜಲೀಕರಣ ಆಗದಂತೆ ಗಮನವಹಿಸಬೇಕು. ಜೊತೆಗೆ ಉಷ್ಣಾಂಶ ಹೆಚ್ಚಾದಾಗ ಕೆಲವು ತೊಂದರೆಗಳು ಆಗುತ್ತವೆ ಎಂದರು.
ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗಳಿಗೆ ಬೇಸಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೇ ದೇಹ ನಿರ್ಜಲೀಕರಣವಾದಾಗ ಮನೆಯಲ್ಲೇ ಓಆರ್ಎಸ್ ದ್ರಾವಣ ಹೇಗೆ ತಯಾರಿಸಬೇಕು ಎಂಬುದನ್ನು ಸಹ ಆಶಾ ಕಾರ್ಯಕರ್ತೆಯರು ಹೇಳಿಕೊಡುತ್ತಾರೆ. ಹೀಗಾಗಿ ಈ ನಿಟ್ಟಿನಲ್ಲಿ ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದು ಹೇಳಿದರು.
ಇನ್ನು ಸಾರ್ವಜನಿಕರು ಸಾಧ್ಯವಾದಷ್ಟು ನೀರು, ತಂಪು ಪಾನೀಯಗಳ ಸೇವಿಸಬೇಕು, ಮಾಂಸಹಾರ ಕಡಿಮೆ ಮಾಡಿ ಸಸ್ಯಹಾರವನ್ನೇ ಹೆಚ್ಚು ಬಳಸಬೇಕು. ರೈತರು ಹೊಲ ಗದ್ದೆಗಳಲ್ಲಿ ದುಡಿಯುವವರು ಮುಂಜಾನೆ ಹೋಗಿ 10.30,11 ಗಂಟೆ ಸಮಯಕ್ಕೆ ಮನೆಗೆ ಬಂದು ವಿರಮಿಸಬೇಕು. ಬಿಸಿಲ ತಾಪದಲ್ಲಿ ಕೆಲಸ ಮಾಡುವುದನ್ನು ಆದಷ್ಟು ಕಡಿಮೆ ಮಾಡಬೇಕು. ಬೇಸಿಗೆ ನಿರ್ವಹಣೆಗೆ ನಾವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ. ಹಾಗಾಗಿ ಕೈಪಿಡಿಗಳು ಮತ್ತು ಪೋಸ್ಟರ್ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ. ಅದರೊಂದಿಗೆ ಜಿಲ್ಲಾ ಮಟ್ಟದಲ್ಲೂ ವೈದ್ಯರಿಗೆ ಬೇಸಿಗೆ ಸಂಧರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರತ್ಯೇಕ ಸಭೆ ಮಾಡಿ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…