ಎಚ್.ಡಿ.ಕೋಟೆ: ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಅವರು ಹ್ಯಾಂಡ್ ಪೋಸ್ಟ್ ಮತ್ತು ಹಂಪಾಪುರ ಗ್ರಾಮದಲ್ಲಿ ಇರುವ ಐಸ್ ಕ್ರೀಮ್ ಘಟಕಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಪೂರ್ಣ ಘಟಕಗಳನ್ನು ಪರಿಶೀಲನೆ ನಡೆಸಿದ ಡಾ.ರವಿಕುಮಾರ್ ಅವರು, ಕೃತಕ ಬಣ್ಣ ಬಳಸುತ್ತಿದ್ದ ಘಟಕಗಳಿಗೆ ನೋಟಿಸ್ ಜಾರಿ ಮಾಡಿ ದಂಡ ವಿಧಿಸಿದರು.
ಬಳಿಕ ಮಾತನಾಡಿದ ಅವರು, ಐಸ್ ಕ್ರೀಮ್ಗಳನ್ನು ತಯಾರಿಸುವಾಗ ಶುದ್ಧವಾದ ನೀರನ್ನು ಉಪಯೋಗಿಸಿ ತಯಾರು ಮಾಡಬೇಕು. ಯಾವುದೇ ರೀತಿಯ ಬಣ್ಣಗಳನ್ನು ಹಾಕಬಾರದು. ಐಸ್ ಕ್ರೀಮ್ ತಯಾರಿಸುವ ಸ್ಥಳಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಕಡ್ಡಾಯವಾಗಿ ಫುಡ್ ಲೈಸನ್ಸ್ ಅನ್ನು ಒಂದು ವಾರದ ಒಳಗೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಫುಡ್ ಲೈಸೆನ್ಸ್ ಪಡೆಯದೇ ಐಸ್ ಕ್ರೀಮ್ ತಯಾರಿಸಬಾರದು. ಲೈಸೆನ್ಸ್ ಪಡೆಯದೇ ಇದ್ದರೆ ಅಂತಹ ಘಟಕಗಳಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರವಿರಾಜ್, ನಾಗೇಶ್ ಮತ್ತು ಪ್ರತಾಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…