ಎಚ್.ಡಿ.ಕೋಟೆ: ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಅವರು ಹ್ಯಾಂಡ್ ಪೋಸ್ಟ್ ಮತ್ತು ಹಂಪಾಪುರ ಗ್ರಾಮದಲ್ಲಿ ಇರುವ ಐಸ್ ಕ್ರೀಮ್ ಘಟಕಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಪೂರ್ಣ ಘಟಕಗಳನ್ನು ಪರಿಶೀಲನೆ ನಡೆಸಿದ ಡಾ.ರವಿಕುಮಾರ್ ಅವರು, ಕೃತಕ ಬಣ್ಣ ಬಳಸುತ್ತಿದ್ದ ಘಟಕಗಳಿಗೆ ನೋಟಿಸ್ ಜಾರಿ ಮಾಡಿ ದಂಡ ವಿಧಿಸಿದರು.
ಬಳಿಕ ಮಾತನಾಡಿದ ಅವರು, ಐಸ್ ಕ್ರೀಮ್ಗಳನ್ನು ತಯಾರಿಸುವಾಗ ಶುದ್ಧವಾದ ನೀರನ್ನು ಉಪಯೋಗಿಸಿ ತಯಾರು ಮಾಡಬೇಕು. ಯಾವುದೇ ರೀತಿಯ ಬಣ್ಣಗಳನ್ನು ಹಾಕಬಾರದು. ಐಸ್ ಕ್ರೀಮ್ ತಯಾರಿಸುವ ಸ್ಥಳಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಕಡ್ಡಾಯವಾಗಿ ಫುಡ್ ಲೈಸನ್ಸ್ ಅನ್ನು ಒಂದು ವಾರದ ಒಳಗೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಫುಡ್ ಲೈಸೆನ್ಸ್ ಪಡೆಯದೇ ಐಸ್ ಕ್ರೀಮ್ ತಯಾರಿಸಬಾರದು. ಲೈಸೆನ್ಸ್ ಪಡೆಯದೇ ಇದ್ದರೆ ಅಂತಹ ಘಟಕಗಳಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರವಿರಾಜ್, ನಾಗೇಶ್ ಮತ್ತು ಪ್ರತಾಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…