ನಂಜನಗೂಡು: ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಆಕಾಡೆಮಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಗೆ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ಅವರು ಪಾತ್ರರಾಗಿದ್ದಾರೆ.
ತಮಿಳುನಾಡಿನ ಹೊಸೂರು ಪಟ್ಟಣದ ಖಾಸಗಿ ಹೋಟೆಲ್ ವೊಂದರಲ್ಲಿ ಅಂತರಾಷ್ಟ್ರೀಯ ಸಾಧನೆಯ ಪ್ರಶಸ್ತಿಗಳು, ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಅಕಾಡೆಮಿ ವತಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ನಂಜನಗೂಡಿನಲ್ಲಿ ಆಟೋ ಅಮ್ಮ ಎಂದೇ ಖ್ಯಾತಿ ಪಡೆದಿರುವ ಡಾ.ಸರಸ್ವತಿ ಚಂದ್ರಶೇಖರ್ ರವರ 15 ವರ್ಷಗಳ ಸಾಮಾಜಿಕ ಸೇವೆ ಗುರುತಿಸಿ ಮೈಸೂರು, ಕರ್ನಾಟಕ, ಇಂಡಿಯಾ ರಿಯಾಲಿಟಿ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಅಕಾಡೆಮಿ ವಿಶ್ವ ದಾಖಲೆ ಮಾರ್ಗಸೂಚಿಗಳ ಪ್ರಕಾರ ಮೌಲ್ಯಮಾಪನ ಮಾಡಿ, ಸಮಾಜ ಸೇವೆಯಲ್ಲಿ ತೊಡಗಿರುವ ಡಾ. ಸರಸ್ವತಿ ಚಂದ್ರಶೇಖರ್ ರವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಚೇರ್ಮನ್ ಡಾ. ರಾಬರ್ಟ್ ರೋಮ್ಯಾನುಯೆಲ್ ಹೇರ್ಮ್ಯಾನ್, ಆಕಾಡೆಮಿಯ ಅಧ್ಯಕ್ಷ ಡಾ.ಎ.ಪಿ.ಶ್ರೀನಾಥ್, ಇಂಟರ್ ನ್ಯಾಷನಲ್ ತಾಂತ್ರಿಕ ಅಧಿಕಾರಿ ಶ್ರೀ.ಅನಾಥನ್ ಕುಪುಸಾಮಿ, ನಿರ್ದೇಶಕ
ಡಾ.ಆರ್.ಸೆಲ್ವಂ, ಉಪಾಧ್ಯಕ್ಷ ಅರ್ಜುನ್ ಸೇರಿದಂತೆ ಹಲವರು ಹಾಜರಿದ್ದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…