ಮೈಸೂರು

ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವಕ್ಕೆ ಭಾಜನರಾದ ಡಾ.ಸರಸ್ವತಿ ಚಂದ್ರಶೇಖರ್‌

ನಂಜನಗೂಡು: ಏಷ್ಯಾ ಇಂಟರ್‌ ನ್ಯಾಷನಲ್‌ ಕಲ್ಚರ್‌ ರಿಸರ್ಚ್‌ ಆಕಾಡೆಮಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಗೆ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ಅವರು ಪಾತ್ರರಾಗಿದ್ದಾರೆ.

ತಮಿಳುನಾಡಿನ ಹೊಸೂರು ಪಟ್ಟಣದ ಖಾಸಗಿ ಹೋಟೆಲ್‌ ವೊಂದರಲ್ಲಿ ಅಂತರಾಷ್ಟ್ರೀಯ ಸಾಧನೆಯ ಪ್ರಶಸ್ತಿಗಳು, ಏಷ್ಯಾ ಇಂಟರ್‌ ನ್ಯಾಷನಲ್ ಕಲ್ಚರ್ ರಿಸರ್ಚ್ ಅಕಾಡೆಮಿ ವತಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ನಂಜನಗೂಡಿನಲ್ಲಿ ಆಟೋ ಅಮ್ಮ ಎಂದೇ ಖ್ಯಾತಿ ಪಡೆದಿರುವ ಡಾ.ಸರಸ್ವತಿ ಚಂದ್ರಶೇಖರ್ ರವರ 15 ವರ್ಷಗಳ ಸಾಮಾಜಿಕ ಸೇವೆ ಗುರುತಿಸಿ ಮೈಸೂರು, ಕರ್ನಾಟಕ, ಇಂಡಿಯಾ ರಿಯಾಲಿಟಿ ಇಂಟರ್‌ ನ್ಯಾಷನಲ್ ಸ್ಪೋರ್ಟ್ಸ್ ಅಕಾಡೆಮಿ ವಿಶ್ವ ದಾಖಲೆ ಮಾರ್ಗಸೂಚಿಗಳ ಪ್ರಕಾರ ಮೌಲ್ಯಮಾಪನ ಮಾಡಿ, ಸಮಾಜ ಸೇವೆಯಲ್ಲಿ ತೊಡಗಿರುವ ಡಾ. ಸರಸ್ವತಿ ಚಂದ್ರಶೇಖರ್ ರವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಚೇರ್ಮನ್ ಡಾ. ರಾಬರ್ಟ್ ರೋಮ್ಯಾನುಯೆಲ್ ಹೇರ್‌ಮ್ಯಾನ್, ಆಕಾಡೆಮಿಯ ಅಧ್ಯಕ್ಷ ಡಾ.ಎ.ಪಿ.ಶ್ರೀನಾಥ್, ಇಂಟರ್ ನ್ಯಾಷನಲ್ ತಾಂತ್ರಿಕ ಅಧಿಕಾರಿ ಶ್ರೀ.ಅನಾಥನ್ ಕುಪುಸಾಮಿ, ನಿರ್ದೇಶಕ
ಡಾ.ಆರ್.ಸೆಲ್ವಂ, ಉಪಾಧ್ಯಕ್ಷ ಅರ್ಜುನ್ ಸೇರಿದಂತೆ ಹಲವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago