ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು.
ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಮೇಘ ಮೈತ್ರಿ ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕನ್ನಡವು ದ್ರಾವಿಡ ಭಾಷೆಯಾಗಿದ್ದರೂ ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳಿಂದಲೂ ಪ್ರಭಾವಿತವಾಗಿದೆ. ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದರು.
ಕನ್ನಡವು ದಕ್ಷಿಣ ದ್ರಾವಿಡ ಶಾಖೆಯ ಭಾಗವಾಗಿದ್ದರೂ ಅದು ಕುಟುಂಬದೊಳಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಅಭಿವೃದ್ಧಿಯನ್ನು ಹೊಂದಿದೆ. ತಮಿಳು ಸಾಹಿತ್ಯದ ಉಳಿದಿರುವ ಸಂಗ್ರಹವು ಅದರ ಕನ್ನಡ ಪ್ರತಿರೂಪಕ್ಕಿಂತ ಹಳೆಯದಾಗಿರಬಹುದು. ಆದಾಗ್ಯೂ ಇದರ ಅರ್ಥ ತಮಿಳು ಕನ್ನಡಕ್ಕಿಂತ ಹಳೆಯ ಭಾಷೆ ಎಂದು ಅರ್ಥವಲ್ಲ ಎಂದು ಹೇಳಿದರು.
ಸಾಹಿತಿ ಟಿ.ಸತೀಶ್ ಜವರೇಗೌಡ, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರು ಹಡವನಹಳ್ಳಿ ವೀರಣ್ಣಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು ಲೋಕಾರ್ಪಣೆ ಮಾಡಿದರು.
ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಹೋರಾಟಗಾರ ಕುರುಬಾರಹಳ್ಳಿ ಧನಪಾಲ್ ಮೆರವಣಿಗೆಗೆ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ವಿಜಯಕುಮಾರ ಎಸ್.ಕಟಗಿಹಳ್ಳಿಮಠ ನೂತನ ಅಧ್ಯಕ್ಷ ಡಾ.ಸಿ.ಶರತ್ಕುಮಾರ್ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಸಮಾಜ ಸೇವಕರಾದ ಡಾ.ಶಕುಂತಲಾ ಜಯದೇವ್ ಹಾಜರಿದ್ದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…