ಮೈಸೂರು

ದ್ರಾವಿಡ ಭಾಷೆಗಳನ್ನು ಸಹೋದರತ್ವದಿಂದ ನೋಡಿ ; ವೈದ್ಯ ಶರತ್‌

ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು.

ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಮೇಘ ಮೈತ್ರಿ ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕನ್ನಡವು ದ್ರಾವಿಡ ಭಾಷೆಯಾಗಿದ್ದರೂ ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳಿಂದಲೂ ಪ್ರಭಾವಿತವಾಗಿದೆ. ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದರು.

ಕನ್ನಡವು ದಕ್ಷಿಣ ದ್ರಾವಿಡ ಶಾಖೆಯ ಭಾಗವಾಗಿದ್ದರೂ ಅದು ಕುಟುಂಬದೊಳಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಅಭಿವೃದ್ಧಿಯನ್ನು ಹೊಂದಿದೆ. ತಮಿಳು ಸಾಹಿತ್ಯದ ಉಳಿದಿರುವ ಸಂಗ್ರಹವು ಅದರ ಕನ್ನಡ ಪ್ರತಿರೂಪಕ್ಕಿಂತ ಹಳೆಯದಾಗಿರಬಹುದು. ಆದಾಗ್ಯೂ ಇದರ ಅರ್ಥ ತಮಿಳು ಕನ್ನಡಕ್ಕಿಂತ ಹಳೆಯ ಭಾಷೆ ಎಂದು ಅರ್ಥವಲ್ಲ ಎಂದು ಹೇಳಿದರು.

ಸಾಹಿತಿ ಟಿ.ಸತೀಶ್ ಜವರೇಗೌಡ, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರು ಹಡವನಹಳ್ಳಿ ವೀರಣ್ಣಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು ಲೋಕಾರ್ಪಣೆ ಮಾಡಿದರು.

ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಹೋರಾಟಗಾರ ಕುರುಬಾರಹಳ್ಳಿ ಧನಪಾಲ್ ಮೆರವಣಿಗೆಗೆ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ವಿಜಯಕುಮಾರ ಎಸ್.ಕಟಗಿಹಳ್ಳಿಮಠ ನೂತನ ಅಧ್ಯಕ್ಷ ಡಾ.ಸಿ.ಶರತ್‌ಕುಮಾರ್ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಸಮಾಜ ಸೇವಕರಾದ ಡಾ.ಶಕುಂತಲಾ ಜಯದೇವ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

3 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

22 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

1 hour ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

1 hour ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago