ಮೈಸೂರು

ದ್ರಾವಿಡ ಭಾಷೆಗಳನ್ನು ಸಹೋದರತ್ವದಿಂದ ನೋಡಿ ; ವೈದ್ಯ ಶರತ್‌

ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು.

ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಮೇಘ ಮೈತ್ರಿ ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕನ್ನಡವು ದ್ರಾವಿಡ ಭಾಷೆಯಾಗಿದ್ದರೂ ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳಿಂದಲೂ ಪ್ರಭಾವಿತವಾಗಿದೆ. ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದರು.

ಕನ್ನಡವು ದಕ್ಷಿಣ ದ್ರಾವಿಡ ಶಾಖೆಯ ಭಾಗವಾಗಿದ್ದರೂ ಅದು ಕುಟುಂಬದೊಳಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಅಭಿವೃದ್ಧಿಯನ್ನು ಹೊಂದಿದೆ. ತಮಿಳು ಸಾಹಿತ್ಯದ ಉಳಿದಿರುವ ಸಂಗ್ರಹವು ಅದರ ಕನ್ನಡ ಪ್ರತಿರೂಪಕ್ಕಿಂತ ಹಳೆಯದಾಗಿರಬಹುದು. ಆದಾಗ್ಯೂ ಇದರ ಅರ್ಥ ತಮಿಳು ಕನ್ನಡಕ್ಕಿಂತ ಹಳೆಯ ಭಾಷೆ ಎಂದು ಅರ್ಥವಲ್ಲ ಎಂದು ಹೇಳಿದರು.

ಸಾಹಿತಿ ಟಿ.ಸತೀಶ್ ಜವರೇಗೌಡ, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರು ಹಡವನಹಳ್ಳಿ ವೀರಣ್ಣಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು ಲೋಕಾರ್ಪಣೆ ಮಾಡಿದರು.

ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಹೋರಾಟಗಾರ ಕುರುಬಾರಹಳ್ಳಿ ಧನಪಾಲ್ ಮೆರವಣಿಗೆಗೆ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ವಿಜಯಕುಮಾರ ಎಸ್.ಕಟಗಿಹಳ್ಳಿಮಠ ನೂತನ ಅಧ್ಯಕ್ಷ ಡಾ.ಸಿ.ಶರತ್‌ಕುಮಾರ್ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಸಮಾಜ ಸೇವಕರಾದ ಡಾ.ಶಕುಂತಲಾ ಜಯದೇವ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

13 mins ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

47 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

1 hour ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

2 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

2 hours ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

3 hours ago