ಮೈಸೂರು

ದ್ರಾವಿಡ ಭಾಷೆಗಳನ್ನು ಸಹೋದರತ್ವದಿಂದ ನೋಡಿ ; ವೈದ್ಯ ಶರತ್‌

ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು.

ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಮೇಘ ಮೈತ್ರಿ ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕನ್ನಡವು ದ್ರಾವಿಡ ಭಾಷೆಯಾಗಿದ್ದರೂ ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳಿಂದಲೂ ಪ್ರಭಾವಿತವಾಗಿದೆ. ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದರು.

ಕನ್ನಡವು ದಕ್ಷಿಣ ದ್ರಾವಿಡ ಶಾಖೆಯ ಭಾಗವಾಗಿದ್ದರೂ ಅದು ಕುಟುಂಬದೊಳಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಅಭಿವೃದ್ಧಿಯನ್ನು ಹೊಂದಿದೆ. ತಮಿಳು ಸಾಹಿತ್ಯದ ಉಳಿದಿರುವ ಸಂಗ್ರಹವು ಅದರ ಕನ್ನಡ ಪ್ರತಿರೂಪಕ್ಕಿಂತ ಹಳೆಯದಾಗಿರಬಹುದು. ಆದಾಗ್ಯೂ ಇದರ ಅರ್ಥ ತಮಿಳು ಕನ್ನಡಕ್ಕಿಂತ ಹಳೆಯ ಭಾಷೆ ಎಂದು ಅರ್ಥವಲ್ಲ ಎಂದು ಹೇಳಿದರು.

ಸಾಹಿತಿ ಟಿ.ಸತೀಶ್ ಜವರೇಗೌಡ, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರು ಹಡವನಹಳ್ಳಿ ವೀರಣ್ಣಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು ಲೋಕಾರ್ಪಣೆ ಮಾಡಿದರು.

ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಹೋರಾಟಗಾರ ಕುರುಬಾರಹಳ್ಳಿ ಧನಪಾಲ್ ಮೆರವಣಿಗೆಗೆ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ವಿಜಯಕುಮಾರ ಎಸ್.ಕಟಗಿಹಳ್ಳಿಮಠ ನೂತನ ಅಧ್ಯಕ್ಷ ಡಾ.ಸಿ.ಶರತ್‌ಕುಮಾರ್ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಸಮಾಜ ಸೇವಕರಾದ ಡಾ.ಶಕುಂತಲಾ ಜಯದೇವ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

5 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

5 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

5 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

5 hours ago