ನಂಜನಗೂಡು: ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ.
ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು ನದಿ ಹಾಗೂ ಕೆರೆ ನೀರಿನೊಂದಿಗೆ ಕೊಳಬೆ ಬಾವಿಯ ನೀರನ್ನು ಕುಡಿಯಲು ಆಶ್ರಯಿಸುವಂತಾಗಿದೆ.
ನಂಜನಗೂಡು ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಕಪಿಲಾ ನದಿಯಿಂದ ನೀರು ಪೂರೈಸಲಾಗುತ್ತಿದೆ.
ಕಳೆದ ಒಂದೂವರೆ ವರ್ಷದಿಂದ ದುರಸ್ತಿ ನೆಪದಲ್ಲಿ ಘಟಕ ಸ್ಥಗಿತಗೊಂಡಿದ್ದು, ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಲ್ಲಹಳ್ಳಿ ಸಮೀಪ ಕಪಿಲಾ ನದಿಯಿಂದ 250 ಅಶ್ವಶಕ್ತಿಯ ಮೋಟಾರ್ಗಳಿಂದ ನೀರೆತ್ತಿ ಮಾದಾಪುರದಿಂದ ಶುದ್ಧೀಕರಿಸಿ, 288 ಕಿಮೀ ಕುಡಿಯುವ ನೀರಿನ ಮಾರ್ಗದ ಮೂಲಕ 123 ಹಳ್ಳಿಗಳಿಗೆ ನೀರು ಪೂರೈಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನತೆ ಕುಡಿಯುವ ನೀರಿಗಾಗಿ ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…