ನಂಜನಗೂಡು: ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ.
ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು ನದಿ ಹಾಗೂ ಕೆರೆ ನೀರಿನೊಂದಿಗೆ ಕೊಳಬೆ ಬಾವಿಯ ನೀರನ್ನು ಕುಡಿಯಲು ಆಶ್ರಯಿಸುವಂತಾಗಿದೆ.
ನಂಜನಗೂಡು ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಕಪಿಲಾ ನದಿಯಿಂದ ನೀರು ಪೂರೈಸಲಾಗುತ್ತಿದೆ.
ಕಳೆದ ಒಂದೂವರೆ ವರ್ಷದಿಂದ ದುರಸ್ತಿ ನೆಪದಲ್ಲಿ ಘಟಕ ಸ್ಥಗಿತಗೊಂಡಿದ್ದು, ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಲ್ಲಹಳ್ಳಿ ಸಮೀಪ ಕಪಿಲಾ ನದಿಯಿಂದ 250 ಅಶ್ವಶಕ್ತಿಯ ಮೋಟಾರ್ಗಳಿಂದ ನೀರೆತ್ತಿ ಮಾದಾಪುರದಿಂದ ಶುದ್ಧೀಕರಿಸಿ, 288 ಕಿಮೀ ಕುಡಿಯುವ ನೀರಿನ ಮಾರ್ಗದ ಮೂಲಕ 123 ಹಳ್ಳಿಗಳಿಗೆ ನೀರು ಪೂರೈಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನತೆ ಕುಡಿಯುವ ನೀರಿಗಾಗಿ ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಾರೆ.
ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…
ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…
ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…
ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…