ನಂಜನಗೂಡು: ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ.
ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು ನದಿ ಹಾಗೂ ಕೆರೆ ನೀರಿನೊಂದಿಗೆ ಕೊಳಬೆ ಬಾವಿಯ ನೀರನ್ನು ಕುಡಿಯಲು ಆಶ್ರಯಿಸುವಂತಾಗಿದೆ.
ನಂಜನಗೂಡು ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಕಪಿಲಾ ನದಿಯಿಂದ ನೀರು ಪೂರೈಸಲಾಗುತ್ತಿದೆ.
ಕಳೆದ ಒಂದೂವರೆ ವರ್ಷದಿಂದ ದುರಸ್ತಿ ನೆಪದಲ್ಲಿ ಘಟಕ ಸ್ಥಗಿತಗೊಂಡಿದ್ದು, ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಲ್ಲಹಳ್ಳಿ ಸಮೀಪ ಕಪಿಲಾ ನದಿಯಿಂದ 250 ಅಶ್ವಶಕ್ತಿಯ ಮೋಟಾರ್ಗಳಿಂದ ನೀರೆತ್ತಿ ಮಾದಾಪುರದಿಂದ ಶುದ್ಧೀಕರಿಸಿ, 288 ಕಿಮೀ ಕುಡಿಯುವ ನೀರಿನ ಮಾರ್ಗದ ಮೂಲಕ 123 ಹಳ್ಳಿಗಳಿಗೆ ನೀರು ಪೂರೈಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನತೆ ಕುಡಿಯುವ ನೀರಿಗಾಗಿ ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…