ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಅರೇಳು ತಿಂಗಳುಗಳಿಂದ ಹುಲ್ಲಹಳ್ಳಿ ಗ್ರಾಮದ ಆರು ಮತ್ತು ಏಳನೆಯ ವಾರ್ಡ್ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜನ ಜಾನುವಾರು ಸಾಕಷ್ಟು ಪರಿ ತಪ್ಪಿಸಿದರು ಕೂಡ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಡಿಯುವ ನೀರು ಕಲ್ಪಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಸಾಕಷ್ಟು ಬಾರಿ ಗ್ರಾಮಸ್ಥರು ಮನವಿಯನ್ನು ಮಾಡಿದ್ದಾರೆ. ಗ್ರಾಮದ ಮುಂಭಾಗದಲ್ಲೇ ಕಪಿಲಾ ನದಿ ಹಾದು ಹೋಗಿದ್ದರೂ ಕೂಡ ಬೇಸಿಗೆಗೂ ಮುನ್ನ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಹುಲ್ಲಹಳ್ಳಿ ಗ್ರಾಮಸ್ಥರನ್ನು ರೊಚ್ಚಿಗೇಳಿಸಿದೆ.
ಎಷ್ಟೇ ಮನವಿ ಮಾಡಿದರು ಸ್ಪಂದಿಸದ ಪಿಡಿಒ ಮತ್ತು ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಒಳಗೆ ಯಾರೂ ಕೂಡ ಪ್ರವೇಶ ಮಾಡದಂತೆ ದಿಗ್ಬಂದನ ವಿಧಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…