ಮೈಸೂರು

ಮೈಸೂರು| ನಾಗರಹೊಳೆ ಅಭಯಾರಣ್ಯಕ್ಕೆ ತಟ್ಟಿದ ಬೇಸಿಗೆ ಬಿಸಿ.?

ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂರೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯದಲ್ಲಿರುವ ಕೆರೆ ಕಟ್ಟೆಗಳು ಸಂಪೂರ್ಣ ಭತ್ತಿ ಹೋಗಿದ್ದು, ಕಾಡು ಪ್ರಾಣಿಗಳು ಕುಡಿಯಲು ನೀರಿಲ್ಲದೇ ಪರದಾಟ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಭತ್ತಿದ ಕೆರೆ ಕಟ್ಟೆಗಳಿಗೆ ಟ್ಯಾಂಕರ್‌ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ.

ನಾಗರಹೊಳೆ ಅಭಯಾರಣ್ಯದಲ್ಲಿ ಸರಿಸುಮಾರು 256 ಕೆರೆಗಳಿದ್ದು, ಅದರಲ್ಲಿ 27 ಕೆರೆಗಳಿಗೆ ಸೋಲಾರ್ ಪಂಪ್ ಮೂಲಕ ನೀರನ್ನು ಸಪ್ಲೈ ಮಾಡಲಾಗುತ್ತಿದೆ. ಈ ಮೂಲಕ ನೀರನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುವುದನ್ನು ತಪ್ಪಿಸಲು ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.

ಒಟ್ಟಾರೆಯಾಗಿ ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಾಡಿಗೆ ನೀರು ಪೂರೈಕೆ ಹಾಗೂ ಕಾಡ್ಗಿಚ್ಚು ತಡೆ ಕೆಲಸ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಮುಂಗಾರು ಮಳೆ ಬೀಳುವವರೆಗೂ ಇದೇ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತ್ತಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

21 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

40 mins ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

59 mins ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

1 hour ago

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

5 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

5 hours ago