ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂರೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯದಲ್ಲಿರುವ ಕೆರೆ ಕಟ್ಟೆಗಳು ಸಂಪೂರ್ಣ ಭತ್ತಿ ಹೋಗಿದ್ದು, ಕಾಡು ಪ್ರಾಣಿಗಳು ಕುಡಿಯಲು ನೀರಿಲ್ಲದೇ ಪರದಾಟ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಭತ್ತಿದ ಕೆರೆ ಕಟ್ಟೆಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ನಾಗರಹೊಳೆ ಅಭಯಾರಣ್ಯದಲ್ಲಿ ಸರಿಸುಮಾರು 256 ಕೆರೆಗಳಿದ್ದು, ಅದರಲ್ಲಿ 27 ಕೆರೆಗಳಿಗೆ ಸೋಲಾರ್ ಪಂಪ್ ಮೂಲಕ ನೀರನ್ನು ಸಪ್ಲೈ ಮಾಡಲಾಗುತ್ತಿದೆ. ಈ ಮೂಲಕ ನೀರನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುವುದನ್ನು ತಪ್ಪಿಸಲು ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.
ಒಟ್ಟಾರೆಯಾಗಿ ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಾಡಿಗೆ ನೀರು ಪೂರೈಕೆ ಹಾಗೂ ಕಾಡ್ಗಿಚ್ಚು ತಡೆ ಕೆಲಸ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಮುಂಗಾರು ಮಳೆ ಬೀಳುವವರೆಗೂ ಇದೇ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತ್ತಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…