ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂರೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯದಲ್ಲಿರುವ ಕೆರೆ ಕಟ್ಟೆಗಳು ಸಂಪೂರ್ಣ ಭತ್ತಿ ಹೋಗಿದ್ದು, ಕಾಡು ಪ್ರಾಣಿಗಳು ಕುಡಿಯಲು ನೀರಿಲ್ಲದೇ ಪರದಾಟ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಭತ್ತಿದ ಕೆರೆ ಕಟ್ಟೆಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ನಾಗರಹೊಳೆ ಅಭಯಾರಣ್ಯದಲ್ಲಿ ಸರಿಸುಮಾರು 256 ಕೆರೆಗಳಿದ್ದು, ಅದರಲ್ಲಿ 27 ಕೆರೆಗಳಿಗೆ ಸೋಲಾರ್ ಪಂಪ್ ಮೂಲಕ ನೀರನ್ನು ಸಪ್ಲೈ ಮಾಡಲಾಗುತ್ತಿದೆ. ಈ ಮೂಲಕ ನೀರನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುವುದನ್ನು ತಪ್ಪಿಸಲು ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.
ಒಟ್ಟಾರೆಯಾಗಿ ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಾಡಿಗೆ ನೀರು ಪೂರೈಕೆ ಹಾಗೂ ಕಾಡ್ಗಿಚ್ಚು ತಡೆ ಕೆಲಸ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಮುಂಗಾರು ಮಳೆ ಬೀಳುವವರೆಗೂ ಇದೇ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…