ಹೆಚ್.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ.
ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಣೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.
ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆರಂಭದಲ್ಲಿ ಚಾಲಕನಿಗೆ ಹೃದಯಾಘಾತವಾದ ವಿಷಯ ತಿಳಿಯದೆ ಚಾಲಕನ ಮೇಲೆ ಗ್ರಾಮಸ್ಥರು ಮುಗಿಬಿದ್ದರು. ಇನ್ನು ಎರಡು ಮೃತದೇಹಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಈ ಕುರಿತು ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…