ಮೈಸೂರು

ಚಾಲಕನಿಗೆ ಹೃದಯಘಾತ| ಪಾದಚಾರಿ ಮಹಿಳೆಗೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಹೆಚ್‌.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ.

ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಣೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.

ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆರಂಭದಲ್ಲಿ ಚಾಲಕನಿಗೆ ಹೃದಯಾಘಾತವಾದ ವಿಷಯ ತಿಳಿಯದೆ ಚಾಲಕನ ಮೇಲೆ ಗ್ರಾಮಸ್ಥರು ಮುಗಿಬಿದ್ದರು. ಇನ್ನು ಎರಡು ಮೃತದೇಹಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಈ ಕುರಿತು ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

14 hours ago