ಮೈಸೂರು

ದಸರಾ ದೀಪಾಲಂಕಾರಕ್ಕೆ ಡ್ರೋನ್ ಶೋ ಮೆರಗು

1500 ಡ್ರೋನ್‌ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ – ದಸರಾ ದೀಪಾಲಂಕಾರದ ಪೋಸ್ಟರ್ ಬಿಡುಗೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡ್ರೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮಾಹಿತಿ ನೀಡಿದರು.

“ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನದಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ. ಈ ಬಾರಿಯ ದೀಪಾಲಂಕಾರವನ್ನು ಅತ್ಯಂತ ಆಕರ್ಷಣೀಯಗೊಳಿಸಲು ಸೆಸ್ಕ್‌ ಅಧಿಕಾರಿಗಳ ತಂಡ ಸಾಕಷ್ಟು ಮುತುವರ್ಜಿ ವಹಿಸಿದೆ. ಒಟ್ಟು 130 ಕಿ.ಮೀ. ದೀಪಾಲಂಕಾರ ಮಾಡುತ್ತಿದ್ದು, 100 ವೃತ್ತಗಳನ್ನು ಅಲಂಕರಿಸುವುದರ ಜತೆದೆ 65 ಪ್ರತಿಕೃತಿಗಳನ್ನು ನಿರ್ಮಿಸಲಾಗುತ್ತಿದೆ. ದಸರಾ ದೀಪಾಲಂಕಾರಕ್ಕಾಗಿ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2881 ಕಿ.ವ್ಯಾ. ಅಂದಾಜು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಭಾರ ಹಾಗೂ 242012 ಯೂನಿಟ್‌ಗಳ ವಿದ್ಯುತ್‌ ಬಳಕೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.

ಡ್ರೋನ್‌ ಶೋ ಆಕರ್ಷಣೆ
“ದಸರಾ ದೀಪಾಲಂಕಾರದೊಂದಿಗೆ ಇದೇ ಮೊದಲ ಬಾರಿಗೆ ಡ್ರೋನ್‌ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್.ಇ.ಡಿ. ಬಲ್ಪ್‌ಗಳನ್ನು ಅಳವಡಿಸಿರುವ ಸುಮಾರು 1500 ಡೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅಕ್ಟೋಬರ್‌ 6, 7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8.15ರವರೆಗೆ ಡ್ರೋನ್‌ ಪ್ರದರ್ಶನ ನಡೆಯಲಿದ್ದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ. 6 ಮತ್ತು 7ರಂದು ಡ್ರೋನ್‌ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ” ಎಂದರು.

ವಿದ್ಯುತ್‌ ರಥ ಸಂಚಾರ
ದಸರಾ 2024ರ ಸಂದರ್ಭದಲ್ಲಿ “ಪವರ್‌ ಮ್ಯಾನ್‌”ಗಳ ಕರ್ತವ್ಯಗಳು, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್ ಪಂಪ್ ಸೆಟ್ ಗಳು, ವಿದ್ಯುತ್ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ವಿದ್ಯುತ್ ರಥವನ್ನು ರೂಪಿಸಲಾಗುವುದು. ಈ ರಥ ಅ.3ರಂದು ಉದ್ಘಾಟನೆಗೊಳ್ಳಲಿದ್ದು, ದಸರಾ ನವರಾತ್ರಿಯ 10 ದಿನಗಳ ಕಾಲ ಮೈಸೂರಿನ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪ್ರದರ್ಶಿಸಲಾಗುವುದು” ಎಂದು ಸಚಿವರು ವಿವರಿಸಿದರು.

ನಿಗಮದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, “ದಸರಾ ದೀಪಾಲಂಕಾರದ ಜತೆಗೆ ಈ ಬಾರಿ ಡ್ರೋನ್‌ ಪ್ರದರ್ಶನ ನಡೆಸಲಾಗುತ್ತಿದೆ. ವಾರಣಾಸಿ, ಹರಿದ್ವಾರಗಳಲ್ಲಿ ಡ್ರೋನ್‌ ಪ್ರದರ್ಶನ ನೀಡಿರುವ ಕಂಪನಿಯ ಮೂಲಕ ಈ ಪ್ರದರ್ಶನ ನಡೆಸುತ್ತಿದ್ದು, 10-15 ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಗುವುದು. ಈ ಬಾರಿ ದಸರಾ ದೀಪಾಲಂಕಾರವನ್ನು ವಿಭಿನ್ನವಾಗಿ ನಡೆಸಲು ನಿಗಮದ ವತಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, ಸೆಸ್ಕ್‌ ಹಣಕಾಸು ನಿರ್ದೇಶಕರಾದ ಶೇಖ್ ಮಹೀಮುಲ್ಲಾ, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago