ಮೈಸೂರು

ಮೈಸೂರಿನಲ್ಲಿ ಡ್ರಗ್ಸ್‌ ತಯಾರಕ ಘಟಕ ಪತ್ತೆ : ನಾಲ್ವರ ಬಂಧನ

ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್‌ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಮಾದಕ ವಸ್ತು ಘಟಕದ ಮೇಲೆ ಮಹಾರಾಷ್ಟ್ರ ಹಾಗೂ ಮೈಸೂರು ನಗರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ಬೆಲೆಯ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತು ಎಂಡಿಎಂಎ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಹಾರಾಷ್ಟ್ರ ಸೇರಿ ದೇಶ ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವತ್ತ ಗ್ರಾಮದ ಬಳಿ ಗ್ಯಾರೇಜ್‌ವೊಂದರಲ್ಲಿ ಈ ಘಟಕ ಕಾರ್ಯ ನಿರ್ವಹಿಸುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಇಬ್ಬರು ಸ್ಥಳೀಯರು, ಇಬ್ಬರು ಮಹಾರಾಷ್ಟ್ರಕ್ಕೆ ಸೇರಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ದೊರೆತಿರಲಿಲ್ಲವೆಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

8 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

8 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

8 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

8 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

9 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

9 hours ago