ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಮಾದಕ ವಸ್ತು ಘಟಕದ ಮೇಲೆ ಮಹಾರಾಷ್ಟ್ರ ಹಾಗೂ ಮೈಸೂರು ನಗರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ಬೆಲೆಯ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತು ಎಂಡಿಎಂಎ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಹಾರಾಷ್ಟ್ರ ಸೇರಿ ದೇಶ ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವತ್ತ ಗ್ರಾಮದ ಬಳಿ ಗ್ಯಾರೇಜ್ವೊಂದರಲ್ಲಿ ಈ ಘಟಕ ಕಾರ್ಯ ನಿರ್ವಹಿಸುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಇಬ್ಬರು ಸ್ಥಳೀಯರು, ಇಬ್ಬರು ಮಹಾರಾಷ್ಟ್ರಕ್ಕೆ ಸೇರಿದವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ದೊರೆತಿರಲಿಲ್ಲವೆಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತ ಲಭ್ಯವಾಗಿದೆ.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…