ಮೈಸೂರು

ಮೈಸೂರಿನಲ್ಲಿ ಡ್ರಗ್ಸ್‌ ತಯಾರಕ ಘಟಕ ಪತ್ತೆ : ನಾಲ್ವರ ಬಂಧನ

ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್‌ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಮಾದಕ ವಸ್ತು ಘಟಕದ ಮೇಲೆ ಮಹಾರಾಷ್ಟ್ರ ಹಾಗೂ ಮೈಸೂರು ನಗರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ಬೆಲೆಯ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತು ಎಂಡಿಎಂಎ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಹಾರಾಷ್ಟ್ರ ಸೇರಿ ದೇಶ ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವತ್ತ ಗ್ರಾಮದ ಬಳಿ ಗ್ಯಾರೇಜ್‌ವೊಂದರಲ್ಲಿ ಈ ಘಟಕ ಕಾರ್ಯ ನಿರ್ವಹಿಸುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಇಬ್ಬರು ಸ್ಥಳೀಯರು, ಇಬ್ಬರು ಮಹಾರಾಷ್ಟ್ರಕ್ಕೆ ಸೇರಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ದೊರೆತಿರಲಿಲ್ಲವೆಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

7 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

12 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

12 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago