ಮೈಸೂರು

ಮೈಸೂರಿನಲ್ಲಿ ಡ್ರಗ್ಸ್‌ ತಯಾರಕ ಘಟಕ ಪತ್ತೆ : ನಾಲ್ವರ ಬಂಧನ

ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್‌ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಮಾದಕ ವಸ್ತು ಘಟಕದ ಮೇಲೆ ಮಹಾರಾಷ್ಟ್ರ ಹಾಗೂ ಮೈಸೂರು ನಗರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ಬೆಲೆಯ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತು ಎಂಡಿಎಂಎ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಹಾರಾಷ್ಟ್ರ ಸೇರಿ ದೇಶ ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವತ್ತ ಗ್ರಾಮದ ಬಳಿ ಗ್ಯಾರೇಜ್‌ವೊಂದರಲ್ಲಿ ಈ ಘಟಕ ಕಾರ್ಯ ನಿರ್ವಹಿಸುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಇಬ್ಬರು ಸ್ಥಳೀಯರು, ಇಬ್ಬರು ಮಹಾರಾಷ್ಟ್ರಕ್ಕೆ ಸೇರಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ದೊರೆತಿರಲಿಲ್ಲವೆಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago