ಮೈಸೂರು

ಡ್ರಗ್ಸ್‌ ಪತ್ತೆ | ಗುಪ್ತಚರ, ಪೊಲೀಸ್‌ ವೈಫಲ್ಯ ಇದೆ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರದಲ್ಲಿ ಗುಪ್ತಚರ, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರೀಕ ಸಮಾಜದ ವಿರುದ್ಧ ನಡೆಯುವ ಯಾವುದೇ ಚಟುವಟಿಕೆ ನಡೆಯಬಾರದು. ಅದನ್ನು ಬೆಂಬಲಿಸುವ ಕೆಲಸ ನಾವು ಎಂದೂ ಸಹ ಮಾಡಿಲ್ಲ. ಇಂತಹದ್ದು ನಡೆಯುತ್ತಿದೆ ಎನ್ನುವುದು ತಿಳಿದಿಲ್ಲ. ಅಂದರೆ ಇಂಟಲಿಜನ್ಸ್ ವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ. ನನ್ನ ಭಾಗಕ್ಕೆ ಕಾನೂನು ಹಾಗೂ ಸಂಚಾರ ವ್ಯವಸ್ಥೆ ಕಡೆಗಣಿಸುವುದು ಹೆಚ್ಚಾಗಿ ಕಾಣುತ್ತಿದೆ. ಹೊರ ವಲಯ ರಸ್ತೆಗಳಲ್ಲಿ ಹೆಚ್ಚು ಕಡಿವಾಣ ಮತ್ತು ನಿಗಾ ವಹಿಸಬೇಕು. ಈ ಬಗ್ಗೆ ಪೊಲೀಸ್ ಆಯುಕ್ತರು ಹಾಗೂ ಸರ್ಕಾರದ ಬಳಿ ಮಾತನಾಡಿದ್ದೇನೆ ಎಂದರು.

ಸಂಸತ್ತಿನಲ್ಲೂ ಮೈಸೂರು ಉದಯಗಿರಿ ಬಗ್ಗೆ ಚರ್ಚೆ ಆಗಿದೆ. ಉದಯಗಿರಿಯಲ್ಲಿ ಹೊಸ ಪೊಲೀಸ್ ಠಾಣೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಹೊಸ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಚುನಾವಣೆ ಸಮಯದಲ್ಲಿ ಪಕ್ಷ ಪ್ರತಿಪಕ್ಷ ಎನ್ನುವ ವಿಚಾರ ಬರಬೇಕು. ಆರೋಪಗಳನ್ನೆಲ್ಲ ಕೇವಲ ಒಬ್ಬರ ಮೇಲೆ ಹಾಕಬಾರದು. ಸಂಸದರು ಹಾಗೂ ಶಾಸಕರಿಗೆ ಚರ್ಚೆ ಮಾಡಲು ಅವಕಾಶ ಇದೆ. ಸರ್ಕಾರದಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದೇವೆ. ರಾಜ್ಯದ ಹಿತ ಕಾಪಾಡುವುದು ಬಿಟ್ಟು ಸಂಸತ್‌ನಲ್ಲಿ ಮಾತಾನಾಡುವುದು ಶೋಭೆ ತರುವಂತಹದ್ದಲ್ಲ ಎಂದು ತಿಳಿಸಿದರು.

ಮೈಸೂರಿನಲ್ಲಿ ಡ್ರಗ್ ಪತ್ತೆಹಚ್ಚಲು ಮಹಾರಾಷ್ಟ್ರದ ಪೊಲೀಸರು ಬರಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ತನ್ವೀರ್ ಸೇಠ್, ನೋಡಿ ನಮ್ಮ ಬೆನ್ನು ನಮಗೆ ಕಾಣಲ್ಲ ಮಹಾರಾಷ್ಟ್ರ ಪೊಲೀಸರಿಗೆ ದಸ್ತಗಿರಿ ಮಾಡಿದ ವ್ಯಕ್ತಿಯಿಂದ ಮಾಹಿತಿ ಸಿಕ್ಕಿದ್ದು. ಅವರಿಗೇನು ಕನಸುಬಿದ್ದು ಮೈಸೂರಿಗೆ ಬಂದಿಲ್ಲ. ಆಡಳಿತದಲ್ಲಿ ಲೋಪ ಆಗಿದೆ ಅದನ್ನು ಒಪ್ಪಬೇಕು. ಗುಪ್ತಚರ ಪೊಲೀಸರ ವೈಫಲ್ಯವೂ ಇದಕ್ಕೆ ಕಾರಣ. ಎಲ್ಲಾ ಕಾಲದಲ್ಲೂ ಅದೇ ಪೊಲೀಸ್ ವ್ಯವಸ್ಥೆ ಇತ್ತು ಎನ್ನುವುದನ್ನು ಮರೆಯಬಾರದು. ಒಪ್ಪುವ ವಿಚಾರ ಒಪ್ಪಬೇಕು. ಇಲ್ಲವಾದ ವಿಚಾರ ಒಪ್ಪುವುದಿಲ್ಲ ಅಷ್ಟೇ .ಸುರಕ್ಷತೆ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಜಾಗೃತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಂಸತ್‌ನಲ್ಲಿ ಸಂಸದ ಯದುವೀರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಅಲ್ಲಿ ಮಾತನಾಡುವುದರಿಂದ ಸಂಸತ್ ಏನು ಮಾಡುತ್ತೆ? ಚುನಾವಣೆಯಿಂದ ಗೆದ್ದು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ ನಾವೇನು ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿಲ್ಲ. ೨೦೦೬, ೨೦೦೮, ೨೦೧೯ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಎಷ್ಟಿತ್ತು? ಜನರ ತೀರ್ಪನ್ನು ಧಿಕ್ಕರಿಸಿ ಮತದಾರರಿಗೆ ಮೋಸ ಮಾಡಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಇಂತಹ ವಿಚಾರಗಳನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಆಡಳಿತದಲ್ಲಿರುವ ಮುಖ್ಯಮಂತ್ರಿ ಮನೆ ಮನೆಗೆ ಹೋಗಿ ನಿಲ್ಲಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಲೋಪ ಆಗಿದ್ದರೆ ಸರಿಮಾಡುವುದರ ಕಡೆಗೆ ಗಮನಹರಿಸಬೇಕು.ಅದು ಬಿಟ್ಟು ಬೇರೆ ರೀತಿ ಮಾತುಗಳು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

11 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

11 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

37 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

1 hour ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

1 hour ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

1 hour ago