ಮೈಸೂರು

ಡ್ರಗ್ಸ್‌ ಪತ್ತೆ | ಗುಪ್ತಚರ, ಪೊಲೀಸ್‌ ವೈಫಲ್ಯ ಇದೆ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರದಲ್ಲಿ ಗುಪ್ತಚರ, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರೀಕ ಸಮಾಜದ ವಿರುದ್ಧ ನಡೆಯುವ ಯಾವುದೇ ಚಟುವಟಿಕೆ ನಡೆಯಬಾರದು. ಅದನ್ನು ಬೆಂಬಲಿಸುವ ಕೆಲಸ ನಾವು ಎಂದೂ ಸಹ ಮಾಡಿಲ್ಲ. ಇಂತಹದ್ದು ನಡೆಯುತ್ತಿದೆ ಎನ್ನುವುದು ತಿಳಿದಿಲ್ಲ. ಅಂದರೆ ಇಂಟಲಿಜನ್ಸ್ ವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ. ನನ್ನ ಭಾಗಕ್ಕೆ ಕಾನೂನು ಹಾಗೂ ಸಂಚಾರ ವ್ಯವಸ್ಥೆ ಕಡೆಗಣಿಸುವುದು ಹೆಚ್ಚಾಗಿ ಕಾಣುತ್ತಿದೆ. ಹೊರ ವಲಯ ರಸ್ತೆಗಳಲ್ಲಿ ಹೆಚ್ಚು ಕಡಿವಾಣ ಮತ್ತು ನಿಗಾ ವಹಿಸಬೇಕು. ಈ ಬಗ್ಗೆ ಪೊಲೀಸ್ ಆಯುಕ್ತರು ಹಾಗೂ ಸರ್ಕಾರದ ಬಳಿ ಮಾತನಾಡಿದ್ದೇನೆ ಎಂದರು.

ಸಂಸತ್ತಿನಲ್ಲೂ ಮೈಸೂರು ಉದಯಗಿರಿ ಬಗ್ಗೆ ಚರ್ಚೆ ಆಗಿದೆ. ಉದಯಗಿರಿಯಲ್ಲಿ ಹೊಸ ಪೊಲೀಸ್ ಠಾಣೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಹೊಸ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಚುನಾವಣೆ ಸಮಯದಲ್ಲಿ ಪಕ್ಷ ಪ್ರತಿಪಕ್ಷ ಎನ್ನುವ ವಿಚಾರ ಬರಬೇಕು. ಆರೋಪಗಳನ್ನೆಲ್ಲ ಕೇವಲ ಒಬ್ಬರ ಮೇಲೆ ಹಾಕಬಾರದು. ಸಂಸದರು ಹಾಗೂ ಶಾಸಕರಿಗೆ ಚರ್ಚೆ ಮಾಡಲು ಅವಕಾಶ ಇದೆ. ಸರ್ಕಾರದಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದೇವೆ. ರಾಜ್ಯದ ಹಿತ ಕಾಪಾಡುವುದು ಬಿಟ್ಟು ಸಂಸತ್‌ನಲ್ಲಿ ಮಾತಾನಾಡುವುದು ಶೋಭೆ ತರುವಂತಹದ್ದಲ್ಲ ಎಂದು ತಿಳಿಸಿದರು.

ಮೈಸೂರಿನಲ್ಲಿ ಡ್ರಗ್ ಪತ್ತೆಹಚ್ಚಲು ಮಹಾರಾಷ್ಟ್ರದ ಪೊಲೀಸರು ಬರಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ತನ್ವೀರ್ ಸೇಠ್, ನೋಡಿ ನಮ್ಮ ಬೆನ್ನು ನಮಗೆ ಕಾಣಲ್ಲ ಮಹಾರಾಷ್ಟ್ರ ಪೊಲೀಸರಿಗೆ ದಸ್ತಗಿರಿ ಮಾಡಿದ ವ್ಯಕ್ತಿಯಿಂದ ಮಾಹಿತಿ ಸಿಕ್ಕಿದ್ದು. ಅವರಿಗೇನು ಕನಸುಬಿದ್ದು ಮೈಸೂರಿಗೆ ಬಂದಿಲ್ಲ. ಆಡಳಿತದಲ್ಲಿ ಲೋಪ ಆಗಿದೆ ಅದನ್ನು ಒಪ್ಪಬೇಕು. ಗುಪ್ತಚರ ಪೊಲೀಸರ ವೈಫಲ್ಯವೂ ಇದಕ್ಕೆ ಕಾರಣ. ಎಲ್ಲಾ ಕಾಲದಲ್ಲೂ ಅದೇ ಪೊಲೀಸ್ ವ್ಯವಸ್ಥೆ ಇತ್ತು ಎನ್ನುವುದನ್ನು ಮರೆಯಬಾರದು. ಒಪ್ಪುವ ವಿಚಾರ ಒಪ್ಪಬೇಕು. ಇಲ್ಲವಾದ ವಿಚಾರ ಒಪ್ಪುವುದಿಲ್ಲ ಅಷ್ಟೇ .ಸುರಕ್ಷತೆ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಜಾಗೃತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಂಸತ್‌ನಲ್ಲಿ ಸಂಸದ ಯದುವೀರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಅಲ್ಲಿ ಮಾತನಾಡುವುದರಿಂದ ಸಂಸತ್ ಏನು ಮಾಡುತ್ತೆ? ಚುನಾವಣೆಯಿಂದ ಗೆದ್ದು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ ನಾವೇನು ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿಲ್ಲ. ೨೦೦೬, ೨೦೦೮, ೨೦೧೯ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಎಷ್ಟಿತ್ತು? ಜನರ ತೀರ್ಪನ್ನು ಧಿಕ್ಕರಿಸಿ ಮತದಾರರಿಗೆ ಮೋಸ ಮಾಡಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಇಂತಹ ವಿಚಾರಗಳನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಆಡಳಿತದಲ್ಲಿರುವ ಮುಖ್ಯಮಂತ್ರಿ ಮನೆ ಮನೆಗೆ ಹೋಗಿ ನಿಲ್ಲಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಲೋಪ ಆಗಿದ್ದರೆ ಸರಿಮಾಡುವುದರ ಕಡೆಗೆ ಗಮನಹರಿಸಬೇಕು.ಅದು ಬಿಟ್ಟು ಬೇರೆ ರೀತಿ ಮಾತುಗಳು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago