ಮೈಸೂರು

ಡ್ರಗ್ಸ್‌ ಪತ್ತೆ | ಗುಪ್ತಚರ, ಪೊಲೀಸ್‌ ವೈಫಲ್ಯ ಇದೆ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರದಲ್ಲಿ ಗುಪ್ತಚರ, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರೀಕ ಸಮಾಜದ ವಿರುದ್ಧ ನಡೆಯುವ ಯಾವುದೇ ಚಟುವಟಿಕೆ ನಡೆಯಬಾರದು. ಅದನ್ನು ಬೆಂಬಲಿಸುವ ಕೆಲಸ ನಾವು ಎಂದೂ ಸಹ ಮಾಡಿಲ್ಲ. ಇಂತಹದ್ದು ನಡೆಯುತ್ತಿದೆ ಎನ್ನುವುದು ತಿಳಿದಿಲ್ಲ. ಅಂದರೆ ಇಂಟಲಿಜನ್ಸ್ ವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ. ನನ್ನ ಭಾಗಕ್ಕೆ ಕಾನೂನು ಹಾಗೂ ಸಂಚಾರ ವ್ಯವಸ್ಥೆ ಕಡೆಗಣಿಸುವುದು ಹೆಚ್ಚಾಗಿ ಕಾಣುತ್ತಿದೆ. ಹೊರ ವಲಯ ರಸ್ತೆಗಳಲ್ಲಿ ಹೆಚ್ಚು ಕಡಿವಾಣ ಮತ್ತು ನಿಗಾ ವಹಿಸಬೇಕು. ಈ ಬಗ್ಗೆ ಪೊಲೀಸ್ ಆಯುಕ್ತರು ಹಾಗೂ ಸರ್ಕಾರದ ಬಳಿ ಮಾತನಾಡಿದ್ದೇನೆ ಎಂದರು.

ಸಂಸತ್ತಿನಲ್ಲೂ ಮೈಸೂರು ಉದಯಗಿರಿ ಬಗ್ಗೆ ಚರ್ಚೆ ಆಗಿದೆ. ಉದಯಗಿರಿಯಲ್ಲಿ ಹೊಸ ಪೊಲೀಸ್ ಠಾಣೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಹೊಸ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಚುನಾವಣೆ ಸಮಯದಲ್ಲಿ ಪಕ್ಷ ಪ್ರತಿಪಕ್ಷ ಎನ್ನುವ ವಿಚಾರ ಬರಬೇಕು. ಆರೋಪಗಳನ್ನೆಲ್ಲ ಕೇವಲ ಒಬ್ಬರ ಮೇಲೆ ಹಾಕಬಾರದು. ಸಂಸದರು ಹಾಗೂ ಶಾಸಕರಿಗೆ ಚರ್ಚೆ ಮಾಡಲು ಅವಕಾಶ ಇದೆ. ಸರ್ಕಾರದಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದೇವೆ. ರಾಜ್ಯದ ಹಿತ ಕಾಪಾಡುವುದು ಬಿಟ್ಟು ಸಂಸತ್‌ನಲ್ಲಿ ಮಾತಾನಾಡುವುದು ಶೋಭೆ ತರುವಂತಹದ್ದಲ್ಲ ಎಂದು ತಿಳಿಸಿದರು.

ಮೈಸೂರಿನಲ್ಲಿ ಡ್ರಗ್ ಪತ್ತೆಹಚ್ಚಲು ಮಹಾರಾಷ್ಟ್ರದ ಪೊಲೀಸರು ಬರಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ತನ್ವೀರ್ ಸೇಠ್, ನೋಡಿ ನಮ್ಮ ಬೆನ್ನು ನಮಗೆ ಕಾಣಲ್ಲ ಮಹಾರಾಷ್ಟ್ರ ಪೊಲೀಸರಿಗೆ ದಸ್ತಗಿರಿ ಮಾಡಿದ ವ್ಯಕ್ತಿಯಿಂದ ಮಾಹಿತಿ ಸಿಕ್ಕಿದ್ದು. ಅವರಿಗೇನು ಕನಸುಬಿದ್ದು ಮೈಸೂರಿಗೆ ಬಂದಿಲ್ಲ. ಆಡಳಿತದಲ್ಲಿ ಲೋಪ ಆಗಿದೆ ಅದನ್ನು ಒಪ್ಪಬೇಕು. ಗುಪ್ತಚರ ಪೊಲೀಸರ ವೈಫಲ್ಯವೂ ಇದಕ್ಕೆ ಕಾರಣ. ಎಲ್ಲಾ ಕಾಲದಲ್ಲೂ ಅದೇ ಪೊಲೀಸ್ ವ್ಯವಸ್ಥೆ ಇತ್ತು ಎನ್ನುವುದನ್ನು ಮರೆಯಬಾರದು. ಒಪ್ಪುವ ವಿಚಾರ ಒಪ್ಪಬೇಕು. ಇಲ್ಲವಾದ ವಿಚಾರ ಒಪ್ಪುವುದಿಲ್ಲ ಅಷ್ಟೇ .ಸುರಕ್ಷತೆ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಜಾಗೃತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಂಸತ್‌ನಲ್ಲಿ ಸಂಸದ ಯದುವೀರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಅಲ್ಲಿ ಮಾತನಾಡುವುದರಿಂದ ಸಂಸತ್ ಏನು ಮಾಡುತ್ತೆ? ಚುನಾವಣೆಯಿಂದ ಗೆದ್ದು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ ನಾವೇನು ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿಲ್ಲ. ೨೦೦೬, ೨೦೦೮, ೨೦೧೯ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಎಷ್ಟಿತ್ತು? ಜನರ ತೀರ್ಪನ್ನು ಧಿಕ್ಕರಿಸಿ ಮತದಾರರಿಗೆ ಮೋಸ ಮಾಡಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಇಂತಹ ವಿಚಾರಗಳನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಆಡಳಿತದಲ್ಲಿರುವ ಮುಖ್ಯಮಂತ್ರಿ ಮನೆ ಮನೆಗೆ ಹೋಗಿ ನಿಲ್ಲಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಲೋಪ ಆಗಿದ್ದರೆ ಸರಿಮಾಡುವುದರ ಕಡೆಗೆ ಗಮನಹರಿಸಬೇಕು.ಅದು ಬಿಟ್ಟು ಬೇರೆ ರೀತಿ ಮಾತುಗಳು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago