political clash can be start anytime
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರದಲ್ಲಿ ಗುಪ್ತಚರ, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರೀಕ ಸಮಾಜದ ವಿರುದ್ಧ ನಡೆಯುವ ಯಾವುದೇ ಚಟುವಟಿಕೆ ನಡೆಯಬಾರದು. ಅದನ್ನು ಬೆಂಬಲಿಸುವ ಕೆಲಸ ನಾವು ಎಂದೂ ಸಹ ಮಾಡಿಲ್ಲ. ಇಂತಹದ್ದು ನಡೆಯುತ್ತಿದೆ ಎನ್ನುವುದು ತಿಳಿದಿಲ್ಲ. ಅಂದರೆ ಇಂಟಲಿಜನ್ಸ್ ವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ. ನನ್ನ ಭಾಗಕ್ಕೆ ಕಾನೂನು ಹಾಗೂ ಸಂಚಾರ ವ್ಯವಸ್ಥೆ ಕಡೆಗಣಿಸುವುದು ಹೆಚ್ಚಾಗಿ ಕಾಣುತ್ತಿದೆ. ಹೊರ ವಲಯ ರಸ್ತೆಗಳಲ್ಲಿ ಹೆಚ್ಚು ಕಡಿವಾಣ ಮತ್ತು ನಿಗಾ ವಹಿಸಬೇಕು. ಈ ಬಗ್ಗೆ ಪೊಲೀಸ್ ಆಯುಕ್ತರು ಹಾಗೂ ಸರ್ಕಾರದ ಬಳಿ ಮಾತನಾಡಿದ್ದೇನೆ ಎಂದರು.
ಸಂಸತ್ತಿನಲ್ಲೂ ಮೈಸೂರು ಉದಯಗಿರಿ ಬಗ್ಗೆ ಚರ್ಚೆ ಆಗಿದೆ. ಉದಯಗಿರಿಯಲ್ಲಿ ಹೊಸ ಪೊಲೀಸ್ ಠಾಣೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಹೊಸ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಚುನಾವಣೆ ಸಮಯದಲ್ಲಿ ಪಕ್ಷ ಪ್ರತಿಪಕ್ಷ ಎನ್ನುವ ವಿಚಾರ ಬರಬೇಕು. ಆರೋಪಗಳನ್ನೆಲ್ಲ ಕೇವಲ ಒಬ್ಬರ ಮೇಲೆ ಹಾಕಬಾರದು. ಸಂಸದರು ಹಾಗೂ ಶಾಸಕರಿಗೆ ಚರ್ಚೆ ಮಾಡಲು ಅವಕಾಶ ಇದೆ. ಸರ್ಕಾರದಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದೇವೆ. ರಾಜ್ಯದ ಹಿತ ಕಾಪಾಡುವುದು ಬಿಟ್ಟು ಸಂಸತ್ನಲ್ಲಿ ಮಾತಾನಾಡುವುದು ಶೋಭೆ ತರುವಂತಹದ್ದಲ್ಲ ಎಂದು ತಿಳಿಸಿದರು.
ಮೈಸೂರಿನಲ್ಲಿ ಡ್ರಗ್ ಪತ್ತೆಹಚ್ಚಲು ಮಹಾರಾಷ್ಟ್ರದ ಪೊಲೀಸರು ಬರಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ತನ್ವೀರ್ ಸೇಠ್, ನೋಡಿ ನಮ್ಮ ಬೆನ್ನು ನಮಗೆ ಕಾಣಲ್ಲ ಮಹಾರಾಷ್ಟ್ರ ಪೊಲೀಸರಿಗೆ ದಸ್ತಗಿರಿ ಮಾಡಿದ ವ್ಯಕ್ತಿಯಿಂದ ಮಾಹಿತಿ ಸಿಕ್ಕಿದ್ದು. ಅವರಿಗೇನು ಕನಸುಬಿದ್ದು ಮೈಸೂರಿಗೆ ಬಂದಿಲ್ಲ. ಆಡಳಿತದಲ್ಲಿ ಲೋಪ ಆಗಿದೆ ಅದನ್ನು ಒಪ್ಪಬೇಕು. ಗುಪ್ತಚರ ಪೊಲೀಸರ ವೈಫಲ್ಯವೂ ಇದಕ್ಕೆ ಕಾರಣ. ಎಲ್ಲಾ ಕಾಲದಲ್ಲೂ ಅದೇ ಪೊಲೀಸ್ ವ್ಯವಸ್ಥೆ ಇತ್ತು ಎನ್ನುವುದನ್ನು ಮರೆಯಬಾರದು. ಒಪ್ಪುವ ವಿಚಾರ ಒಪ್ಪಬೇಕು. ಇಲ್ಲವಾದ ವಿಚಾರ ಒಪ್ಪುವುದಿಲ್ಲ ಅಷ್ಟೇ .ಸುರಕ್ಷತೆ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಜಾಗೃತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸಂಸತ್ನಲ್ಲಿ ಸಂಸದ ಯದುವೀರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಅಲ್ಲಿ ಮಾತನಾಡುವುದರಿಂದ ಸಂಸತ್ ಏನು ಮಾಡುತ್ತೆ? ಚುನಾವಣೆಯಿಂದ ಗೆದ್ದು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ ನಾವೇನು ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿಲ್ಲ. ೨೦೦೬, ೨೦೦೮, ೨೦೧೯ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಎಷ್ಟಿತ್ತು? ಜನರ ತೀರ್ಪನ್ನು ಧಿಕ್ಕರಿಸಿ ಮತದಾರರಿಗೆ ಮೋಸ ಮಾಡಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಇಂತಹ ವಿಚಾರಗಳನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಆಡಳಿತದಲ್ಲಿರುವ ಮುಖ್ಯಮಂತ್ರಿ ಮನೆ ಮನೆಗೆ ಹೋಗಿ ನಿಲ್ಲಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಲೋಪ ಆಗಿದ್ದರೆ ಸರಿಮಾಡುವುದರ ಕಡೆಗೆ ಗಮನಹರಿಸಬೇಕು.ಅದು ಬಿಟ್ಟು ಬೇರೆ ರೀತಿ ಮಾತುಗಳು ಬೇಡ ಎಂದು ಹೇಳಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…