ಮೈಸೂರು : ಸೆಪ್ಟೆಂಬರ್ 1 ರಂದು ಬೆಳಗ್ಗೆ 9.45 ಕ್ಕೆ ಮೈಸೂರು ದಸರಾ ಗಜ ಪಯಣ – 2023 ಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪನವರು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡುವರು. ದಸರಾ-2023 ರ ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕ ಬಿಡುಗಡೆಯನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆಯವರು ನೆರವೇರಿಸಲಿದ್ದು, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಪಶುಸಂಗೋಪನೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರ ಘನ ಉಪಸ್ಥಿತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕಾರ್ಯಕ್ರಮದಲ್ಲಿ ವಿಧಾನಸಭೆಯ ಶಾಸಕರಾದ ತನ್ವೀರ್ ಸೇಠ್, ಜಿ ಟಿ ದೇವೇಗೌಡ, ಅನಿಲ್ ಕುಮಾರ್ ಸಿ, ರವಿಶಂಕರ್ ಡಿ, ದರ್ಶನ್ ಧ್ರುವನಾರಾಯಣ್, ಟಿ.ಎಸ್ ಶ್ರೀವತ್ಸ, ಕೆ ಹರೀಶ್ ಗೌಡ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮರೆತಿಬ್ಬೇಗೌಡ, ಅಡಗೂರು ಹೆಚ್ ವಿಶ್ವನಾಥ್, ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ ಮಧು ಜಿ ಮಾದೇಗೌಡ ಹಾಗೂ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಅಂಬಿಕಾ ಲೋಕೇಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…