ಮೈಸೂರು

ದಸರಾ 2023 : ಸೆಪ್ಟೆಂಬರ್ 1ರಂದು ದಸರಾ ಗಜ ಪಯಣಕ್ಕೆ ಚಾಲನೆ

ಮೈಸೂರು : ಸೆಪ್ಟೆಂಬರ್ 1 ರಂದು ಬೆಳಗ್ಗೆ 9.45 ಕ್ಕೆ ಮೈಸೂರು ದಸರಾ ಗಜ ಪಯಣ – 2023 ಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪನವರು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡುವರು. ದಸರಾ-2023 ರ ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕ ಬಿಡುಗಡೆಯನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆಯವರು ನೆರವೇರಿಸಲಿದ್ದು, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಪಶುಸಂಗೋಪನೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರ ಘನ ಉಪಸ್ಥಿತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಶಾಸಕರಾದ ತನ್ವೀರ್ ಸೇಠ್, ಜಿ ಟಿ ದೇವೇಗೌಡ, ಅನಿಲ್ ಕುಮಾರ್ ಸಿ, ರವಿಶಂಕರ್ ಡಿ, ದರ್ಶನ್ ಧ್ರುವನಾರಾಯಣ್, ಟಿ.ಎಸ್ ಶ್ರೀವತ್ಸ, ಕೆ ಹರೀಶ್ ಗೌಡ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮರೆತಿಬ್ಬೇಗೌಡ, ಅಡಗೂರು ಹೆಚ್ ವಿಶ್ವನಾಥ್, ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ ಮಧು ಜಿ ಮಾದೇಗೌಡ ಹಾಗೂ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಅಂಬಿಕಾ ಲೋಕೇಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago