ಮೈಸೂರು

ದಸರಾ | ಏರ್‌ ಶೋ ಗೆ ಸೂಕ್ತ ವ್ಯವಸ್ಥೆ ಕೋರಿ ಮುಖ್ಯ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಪತ್ರ

ಮೈಸೂರು : 2025ರ ದಸರಾ ಮಹೋತ್ಸವದಲ್ಲಿ ಪ್ರಮುಖ ಆಕರ್ಷಣೆ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿರುವ ನಾಡಹಬ್ಬವನ್ನು ವಿಜೃಂಭಣೆಯಿಂದ ಅದ್ದೂರಿಯಾಗಿ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಯುದ್ಧ ವಿಮಾನಗಳ ಮೂಲಕ ವೈಮಾನಿಕ ಪ್ರದರ್ಶನಕ್ಕೆ ಮೈಸೂರು ಜಿಲ್ಲಾಡಳಿತವು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ.

ನಗರದ ಬನ್ನಿಮಂಟಪದ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯ ವಿಮಾನಗಳಿಂದ ವಿಭಿನ್ನ ಹಾಗೂ ವಿಶೇಷ ಪ್ರದರ್ಶನ ನಡೆಸುವ ಮೂಲಕ ಮೈಸೂರಿಗೆ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಿದ್ದು. ಈ ಕುರಿತು ಜಿಲ್ಲಾಧಿಕಾರಿ ಜಿ. ಲಕ್ಷಿಕಾಂತ್ ರೆಡ್ಡಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಕೇಂದ್ರ ರಕ್ಷಣಾ ಇಲಾಖೆಯಿಂದ ಎರ್ ಶೋಗೆ ವ್ಯವಸ್ಥೆ ಮಾಡಿಸುವಂತೆ ಕೋರಿಕೊಂಡಿದ್ದಾರೆ. ಈ ನಡುವೆ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಬುಧವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಏರ್‌ಶೋ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷಿಕಾಂತ್ ರೆಡ್ಡಿ, ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಮುಖ್ಯ ಕಾರ್ಯದರ್ಶಿಗಳು ಅಗತ್ಯ ಕ್ರಮವಹಿಸಲಿದ್ದಾರೆ ಎಂದರು. ದಸರಾ ಸಿವಿಲ್ ಕಾಮಗಾರಿಗಳನ್ನು ಮುಂಚಿತವಾಗಿಯೇ ಕೈಗೊಳ್ಳಲು ಮೈಸೂರು ಮಹಾನಗರ ಪಾಲಿಕೆಯಿಂದ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದೇವೆ. ಕಡೇ ಘಳಿಗೆಯಲ್ಲಿ ತರಾತುರಿಯಲ್ಲಿ ಕೆಲಸ ಮಾಡುವುದನ್ನು ತಪ್ಪಿಸಲು ಈ ಬಾರಿ ಕ್ರಮವಹಿಸಲಾಗಿದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

7 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago