ಮೈಸೂರು

ದಸರಾ | ಏರ್‌ ಶೋ ಗೆ ಸೂಕ್ತ ವ್ಯವಸ್ಥೆ ಕೋರಿ ಮುಖ್ಯ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಪತ್ರ

ಮೈಸೂರು : 2025ರ ದಸರಾ ಮಹೋತ್ಸವದಲ್ಲಿ ಪ್ರಮುಖ ಆಕರ್ಷಣೆ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿರುವ ನಾಡಹಬ್ಬವನ್ನು ವಿಜೃಂಭಣೆಯಿಂದ ಅದ್ದೂರಿಯಾಗಿ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಯುದ್ಧ ವಿಮಾನಗಳ ಮೂಲಕ ವೈಮಾನಿಕ ಪ್ರದರ್ಶನಕ್ಕೆ ಮೈಸೂರು ಜಿಲ್ಲಾಡಳಿತವು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ.

ನಗರದ ಬನ್ನಿಮಂಟಪದ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯ ವಿಮಾನಗಳಿಂದ ವಿಭಿನ್ನ ಹಾಗೂ ವಿಶೇಷ ಪ್ರದರ್ಶನ ನಡೆಸುವ ಮೂಲಕ ಮೈಸೂರಿಗೆ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಿದ್ದು. ಈ ಕುರಿತು ಜಿಲ್ಲಾಧಿಕಾರಿ ಜಿ. ಲಕ್ಷಿಕಾಂತ್ ರೆಡ್ಡಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಕೇಂದ್ರ ರಕ್ಷಣಾ ಇಲಾಖೆಯಿಂದ ಎರ್ ಶೋಗೆ ವ್ಯವಸ್ಥೆ ಮಾಡಿಸುವಂತೆ ಕೋರಿಕೊಂಡಿದ್ದಾರೆ. ಈ ನಡುವೆ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಬುಧವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಏರ್‌ಶೋ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷಿಕಾಂತ್ ರೆಡ್ಡಿ, ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಮುಖ್ಯ ಕಾರ್ಯದರ್ಶಿಗಳು ಅಗತ್ಯ ಕ್ರಮವಹಿಸಲಿದ್ದಾರೆ ಎಂದರು. ದಸರಾ ಸಿವಿಲ್ ಕಾಮಗಾರಿಗಳನ್ನು ಮುಂಚಿತವಾಗಿಯೇ ಕೈಗೊಳ್ಳಲು ಮೈಸೂರು ಮಹಾನಗರ ಪಾಲಿಕೆಯಿಂದ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದೇವೆ. ಕಡೇ ಘಳಿಗೆಯಲ್ಲಿ ತರಾತುರಿಯಲ್ಲಿ ಕೆಲಸ ಮಾಡುವುದನ್ನು ತಪ್ಪಿಸಲು ಈ ಬಾರಿ ಕ್ರಮವಹಿಸಲಾಗಿದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago