ಮೈಸೂರು

ದಸರೆಗೂ ಆನೆಗೂ ಅವಿನಾಭಾವ ಸಂಬಂಧ: ಈಶ್ವರ ಖಂಡ್ರೆ

ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ 9 ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವರಾದ ವೆಂಕಟೇಶ್ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಾಡಿನಿಂದ ನಾಡಿಗೆ ಆನೆಗಳ ಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಾಡಿನಿಂದ ನಾಡಿನತ್ತ ಕಳುಹಿಸುವುದು ಹಿಂದಿನಿಂದ ಅನೂಚಾನವಾಗಿ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದ್ದು, ಆಶ್ವಯುಜ ಶುದ್ಧ ದಶಮಿಯ ದಿನ ನಡೆಯುವ ಜಂಬೂಸವಾರಿ ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿದೆ. ಇದನ್ನು ನೋಡಲು ದೇಶ ವಿದೇಶಗಳಿಂದಲೂ ಜನರು ಆಗಮಿಸುತ್ತಿರುವುದೇ ಇದರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

ಈ ಬಾರಿಯೂ 58 ವರ್ಷ ವಯಸ್ಸಿನ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ವಿರಾಜಮಾನರಾದ ಚಿನ್ನದ ಅಂಬಾರಿ ಹೊರಲಿದ್ದಾನೆ, ಕಳೆದ ವರ್ಷ ನಿಶಾನೆ ಆನೆಯಾಗಿದ್ದ ಅರ್ಜುನ ಈ ಬಾರಿ ನಮ್ಮೊಂದಿಗಿಲ್ಲ ಎಂಬ ನೋವು ನಮಗಿದೆ. ಕಳೆದ ತಿಂಗಳು ನಾನು ಅರ್ಜುನ ಕಾಡಾನೆಯೊಂದಿಗೆ ಹೋರಾಡಿ ಮಡಿದ ಹಾಸನ ಜಿಲ್ಲೆ, ಯಸಳೂರು ಬಳಿ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಅರ್ಜುನ ಆನೆ ಇದ್ದ ಆನೆ ಶಿಬಿರ ಬಳ್ಳೆಯಲ್ಲಿ ಕೂಡ ಒಂದು ಸ್ಮಾರಕ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

ಹಿಂದೆ ಮೈಸೂರಿನ ಅಂದಿನ ಮಹಾರಾಜರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಮತ್ತು ಆಸ್ಥಾನದವರು ಎಚ್.ಡಿ.ಕೋಟೆ ತಾಲೂಕು ಅಂತರ ಸಂತೆ ಬಳಿಯ ಮಾಸ್ತಿ ಗುಡಿ ಮತ್ತು ಮಾಸ್ತಮ್ಮನ ದೇವಸ್ಥಾನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿದ ತರುವಾಯ ಸಾಂಪ್ರದಾಯಿಕವಾಗಿ ಗಜ ಪಯಣ ಆರಂಭವಾಗುತ್ತಿತ್ತು ಎಂದು ನನಗೆ ತಿಳಿಸಲಾಗಿದೆ.

ಆಗ ಆನೆಗಳು ನಡೆದುಕೊಂಡು ಹೋಗುತ್ತಿದ್ದ ಮಾರ್ಗದ ಹಳ್ಳಿ ಹಳ್ಳಿಯಲ್ಲೂ ಜನರು ತಳಿರು ತೋರಣ ಕಟ್ಟಿ, ರಂಗವಲ್ಲಿ ಹಾಕಿ, ಆನೆಗಳಿಗೆ, ಬಾಳೆಹಣ್ಣು, ಅಕ್ಕಿ, ಬೆಲ್ಲ ಕೊಟ್ಟು ಪೂಜಿಸುತ್ತಿದ್ದರು. ಆನೆಗಳು, ಮಾವುತರು, ಕವಾಡಿಗರ ಇಡೀ ಕುಟುಂಬ ಕಾಲ್ನಡಿಗೆಯಲ್ಲಿ ಮೈಸೂರಿಗೆ ಬರುತ್ತಿತ್ತು ಎಂದು ಕೇಳಿದ್ದೇನೆ. ಈಗ ಸಾಂಕೇತಿಕವಾಗಿ ಇಲ್ಲಿ ಆನೆಗಳು ಮತ್ತು ಮಾವುತರು ಸ್ವಲ್ಪ ದೂರ ಮಾತ್ರ ಹೆಜ್ಜೆ ಹಾಕಿದ ತರುವಾಯ ಲಾರಿಗಳಲ್ಲಿ ಆನೆಗಳನ್ನು ಮೈಸೂರಿಗೆ ಕಳುಹಿಸಲಾಗುತ್ತದೆ. ಆದರೂ ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಎಲ್ಲ ರೀತಿಯ ವಿಧಿ ವಿಧಾನ ನಡೆಸಿಕೊಂಡು ಬರುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲು ಮತ್ತು ಹೆಚ್ಚುವರಿಯಾಗಿ ಆನೆಗಳನ್ನು ಕಾಯ್ದಿರಿಸಲೂ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು. ದಸರಾ ಮಹೋತ್ಸವ ಯಶಸ್ವಿಯಾಗಿ, ವಿಜೃಂಭಣೆಯಿಂದ ನೆರವೇರಲಿ. ಅಧಿದೇವತೆ ನಾಡದೇವಿ ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದ ರಾಜ್ಯದ ಮೇಲೆ ಇರಲಿ. ಉತ್ತಮ ಮಳೆ ಬೆಳೆ ಆಗಲಿ. ರಾಜ್ಯದಲ್ಲಿ ಸುಖ, ಸಮೃದ್ಧಿ ನೆಲೆಸಲಿ ಎಂದು ಈ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago