ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಿವೆ.
ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಿದ್ದು, ಅರಮನೆಯಲ್ಲಿ ಇಂದು ಸಂಜೆ ವೇಳೆಗೆ ಮಹೇಂದ್ರ ನೇತೃತ್ವದ ಐದು ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು.
ಮತ್ತಿಗೋಡು ಆನೆ ಶಿಬಿರದಿಂದ ಮಹೇಂದ್ರ, ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ರಾಮಂಪುರ ಶಿಬಿರದಿಂದ ಲಕ್ಷ್ಮಿ ಹಾಗೂ ಹಿರಣ್ಯ ಆನೆಗಳು ಅರಮನೆಗೆ ಆಗಮಿಸಿದವು.
ಈಗಾಗಲೇ ಅಂಬಾರಿ ಹೊರುವ ಆನೆ ಅಭಿಮನ್ಯು ನೇತೃತ್ವದ ಮೊದಲ ತಂಡದ ಭೀಮ, ಧನಂಜಯ, ಗೋಪಿ, ವರಲಕ್ಷ್ಮಿ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಅರಮನೆಯಲ್ಲಿ ಬೀಡುಬಿಟ್ಟಿದ್ದು, ನಗರದ ವಾತಾವರಣಕ್ಕೆ ಹೊಂದಿಕೊಂಡಿವೆ.
ದಸರಾ ಗಜಪಡೆಗೆ ದಿನನಿತ್ಯ ತಾಲೀಮು ನಡೆಸಲಾಗುತ್ತಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಮ್ಗೆ ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ನಡಿಗೆ ಹಾಗೂ ಭಾರ ಹೊರುವ ತಾಲೀಮು ನಡೆಸಲಾಗುತ್ತಿದೆ.
ಇಂದು ದಸರಾ ಗಜಪಡೆಯ ಎರಡನೇ ತಂಡ ಆಗಮಿಸಿದ್ದು, ಅವುಗಳು ಕೂಡ ತಾಲೀಮಿನಲ್ಲಿ ಭಾಗಿಯಾಗಲಿವೆ. ನಾಳೆ ದಸರಾ ಗಜಪಡೆಯ 14 ಆನೆಗಳು ಕೂಡ ತಾಲೀಮಿನಲ್ಲಿ ಭಾಗಿಯಾಗಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…