ಮೈಸೂರು : ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸುತ್ತಮುತ್ತಲಿನ ಹಾಗೂ ನಗರದ ಸೌಂದರ್ಯ ವೀಕ್ಷಣೆಗೆ ಅಡೆತಡೆಯಾಗಿದ್ದ ಮರಗಳ ರೆಂಬೆ ಹಾಗೂ ಕೊಂಬೆಗಳ ತೆರವು ಕಾರ್ಯಾಚರಣೆ ಶುರುವಾಗಿದೆ.
ಜಂಬೂಸವಾರಿ ಸಾಗುವ ಅರಮನೆಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ರಸ್ತೆ ಬದಿಗಳಲ್ಲಿನ ಬೃಹತ್ ಮರಗಳಲ್ಲಿ ಒಣಗಿರುವ ಅಪಾಯಕಾರಿ ರೆಂಬೆ ಹಾಗೂ ಕೊಂಬೆಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದ್ದು, ಅದರಂತೆ ಇಂದು ಅರಮನೆ ಸುತ್ತ ಇರುವ ರಸ್ತೆಗಳು, ಗನ್ಹೌಸ್ ರಸ್ತೆ, ಹಾರ್ಡಿಂಗ್ ವೃತ್ತ, ಕಾಡಾ ಕಚೇರಿ ರಸ್ತೆ, ಕೆ.ಆರ್.ರಸ್ತೆಗಳಲ್ಲಿ ಇರುವ ಬೃಹತ್ ಮರಗಳನ್ನು ಪರಿಶೀಲಿಸಿದ ಬಳಿಕ, ಒಣಗಿ ಬೀಳುವ ಮಟ್ಟದಲ್ಲಿರುವ ರೆಂಬೆ-ಕೊಂಬೆಗಳನ್ನು ಯಂತ್ರದ ಮೂಲಕ ಕತ್ತರಿಸಲಾಯಿತು.
ಇದನ್ನು ಓದಿ:ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡಹಬ್ಬ: ಸಿಎಂ ಸಿದ್ದರಾಮಯ್ಯ
ಹಾರ್ಡಿಂಜ್ ವೃತ್ತದಿಂದ ಗನ್ ಹೌಸ್ ವೃತ್ತದವರೆಗೆ ತೆರವು ಕಾರ್ಯಾಚರಣೆಯನ್ನು ನಗರ ಪಾಲಿಕೆಯ ತೋಟಗಾರಿಕೆ ವಿಭಾಗದ ಸಿಬ್ಬಂದಿ ಮಾಡಿದರು. ಕಾರ್ಯಾಚರಣೆ ವೇಳೆ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿತ್ತು.
ದಸರಾ ದೀಪಾಲಂಕಾರಕ್ಕಾಗಿ ಹಲವೆಡೆ ಕಂಬಗಳನ್ನು ಅಳವಡಿಸುತ್ತಿರುವ ಚಾಮುಂಡೇಶ್ವರಿ ವಿದ್ಯತ್ ಸರಬರಾಜು ನಿಗಮದವರು ಕೂಡ ಮರಗಳಿಂದ ಅಪಾಯಕಾರಿ ರೆಂಬೆ, ಕೊಂಬೆಗಳನ್ನು ತೆರವುಗೊಳಿಸಿ ಜಾಗ್ರತೆ ವಹಿಸುತ್ತಿದೆ. ಮಳೆಯಾದರೆ ಹಸಿ ಮರಗಳಿಗೆ ವಿದ್ಯುತ್ ಸ್ಪರ್ಶಿಸಿ ಅಪಾಯ ಎದುರಾಗಬಹುದು. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಅಪಾಯಕಾರಿ ಮರಗಳ ರೆಂಬೆ, ಕೊಂಬೆ ತೆರವುಗೊಳಿಸಲಾಗುತ್ತಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…