ಮೈಸೂರು : ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸುತ್ತಮುತ್ತಲಿನ ಹಾಗೂ ನಗರದ ಸೌಂದರ್ಯ ವೀಕ್ಷಣೆಗೆ ಅಡೆತಡೆಯಾಗಿದ್ದ ಮರಗಳ ರೆಂಬೆ ಹಾಗೂ ಕೊಂಬೆಗಳ ತೆರವು ಕಾರ್ಯಾಚರಣೆ ಶುರುವಾಗಿದೆ.
ಜಂಬೂಸವಾರಿ ಸಾಗುವ ಅರಮನೆಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ರಸ್ತೆ ಬದಿಗಳಲ್ಲಿನ ಬೃಹತ್ ಮರಗಳಲ್ಲಿ ಒಣಗಿರುವ ಅಪಾಯಕಾರಿ ರೆಂಬೆ ಹಾಗೂ ಕೊಂಬೆಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದ್ದು, ಅದರಂತೆ ಇಂದು ಅರಮನೆ ಸುತ್ತ ಇರುವ ರಸ್ತೆಗಳು, ಗನ್ಹೌಸ್ ರಸ್ತೆ, ಹಾರ್ಡಿಂಗ್ ವೃತ್ತ, ಕಾಡಾ ಕಚೇರಿ ರಸ್ತೆ, ಕೆ.ಆರ್.ರಸ್ತೆಗಳಲ್ಲಿ ಇರುವ ಬೃಹತ್ ಮರಗಳನ್ನು ಪರಿಶೀಲಿಸಿದ ಬಳಿಕ, ಒಣಗಿ ಬೀಳುವ ಮಟ್ಟದಲ್ಲಿರುವ ರೆಂಬೆ-ಕೊಂಬೆಗಳನ್ನು ಯಂತ್ರದ ಮೂಲಕ ಕತ್ತರಿಸಲಾಯಿತು.
ಇದನ್ನು ಓದಿ:ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡಹಬ್ಬ: ಸಿಎಂ ಸಿದ್ದರಾಮಯ್ಯ
ಹಾರ್ಡಿಂಜ್ ವೃತ್ತದಿಂದ ಗನ್ ಹೌಸ್ ವೃತ್ತದವರೆಗೆ ತೆರವು ಕಾರ್ಯಾಚರಣೆಯನ್ನು ನಗರ ಪಾಲಿಕೆಯ ತೋಟಗಾರಿಕೆ ವಿಭಾಗದ ಸಿಬ್ಬಂದಿ ಮಾಡಿದರು. ಕಾರ್ಯಾಚರಣೆ ವೇಳೆ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿತ್ತು.
ದಸರಾ ದೀಪಾಲಂಕಾರಕ್ಕಾಗಿ ಹಲವೆಡೆ ಕಂಬಗಳನ್ನು ಅಳವಡಿಸುತ್ತಿರುವ ಚಾಮುಂಡೇಶ್ವರಿ ವಿದ್ಯತ್ ಸರಬರಾಜು ನಿಗಮದವರು ಕೂಡ ಮರಗಳಿಂದ ಅಪಾಯಕಾರಿ ರೆಂಬೆ, ಕೊಂಬೆಗಳನ್ನು ತೆರವುಗೊಳಿಸಿ ಜಾಗ್ರತೆ ವಹಿಸುತ್ತಿದೆ. ಮಳೆಯಾದರೆ ಹಸಿ ಮರಗಳಿಗೆ ವಿದ್ಯುತ್ ಸ್ಪರ್ಶಿಸಿ ಅಪಾಯ ಎದುರಾಗಬಹುದು. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಅಪಾಯಕಾರಿ ಮರಗಳ ರೆಂಬೆ, ಕೊಂಬೆ ತೆರವುಗೊಳಿಸಲಾಗುತ್ತಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…