ಮೈಸೂರು

ದ್ವಾರಕೀಶ್‌ ಜೊತೆ ಸಿದ್ದರಾಮಯ್ಯ ಮೊದಲ ಹೆಲಿಕಾಫ್ಟರ್‌ ಪ್ರಯಾಣ !

ಮೈಸೂರು : ಚಿತ್ರನಟ ದ್ವಾರಕೀಶ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ನೇಹ ಪ್ರಾರಂಭವಾಗಿದ್ದು ಒಂದು ಹೆಲಿಕಾಫ್ಟರ್‌ ಪ್ರಯಾಣದಿಂದ.

ದ್ವಾರಕೀಶ್‌ ಹಾಗೂ ಸಿದ್ದರಾಮಯ್ಯ ಅವರ ಒಡನಾಟದ ಬಗ್ಗೆ ಈ ಹಿಂದೆ ದ್ವಾರಕೀಶ್‌ ನೀಡಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು.

ಮೈಸೂರಿನ ಹೆಸರಾಂತ ಪ್ರೀಮಿಯರ್‌ ಸ್ಟೂಡಿಯೋದಲ್ಲಿ ಕನ್ನಡದ ಹೆಸರಾಂತ ನಟಿ ʼಲೀಲಾವತಿʼ ಅವರ ಪುತ್ರ ʼವಿನೋದ್‌ ರಾಜ್‌ಕುಮಾರ್‌ʼ ಅವರ ಮೊಟ್ಟಮೊದಲ ಚಿತ್ರ ʼಡ್ಯಾಂಸ್‌ ರಾಜ ಡ್ಯಾಂಸ್‌ʼ ಚಿತ್ರದ ಶೂಟಿಂಗ್‌ಗಾಗಿ ಬೃಹತ್‌ ಸೆಟ್‌ ಒಂದನ್ನು ಹಾಕಲಾಗಿತ್ತು.

ಇದೇ ವೇಳೆ, ಚಿತ್ರಕ್ಕಾಗಿ ಹೆಲಿಕಾಫ್ಟರ್‌ ಅಗತ್ಯವಿತ್ತು. ಅದೇ ಸಂಸರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗ್ಡೆ ಅವರ ಆಪ್ತ ಸಹಾಯಕ ರಾಮಪ್ಪ ಅವರು ಹೆಲಿಕಾಫ್ಟರ್‌ ಕೊಡಿಸುವಲ್ಲಿ ಸಹಾಯ ಮಾಡಿದ್ದರು.

ಆದರೆ ಸರ್ಕಾರಿ ಹೆಲಿಕಾಫ್ಟರ್‌ ಬಳಸುವುದಾದರೆ, ಅದರಲ್ಲಿ ಕ್ಯಾಬಿನೆಟ್‌ ದರ್ಜೆಯ ವ್ಯಕ್ತಿ ಒಬ್ಬರು ಜೊತೆಯಲ್ಲಿ ಪ್ರಯಾಣಿಸಬೇಕು ಎಂದು ಮುಖ್ಯಮಂತ್ರಿ ಹೆಗ್ಡೆ ಅವರು ಶರತ್ತು ವಿಧಿಸಿದ್ದರು.

ಅಂದಿನ ವಾರ್ತ ಸಚಿವರಾಗಿದ್ದ ಎಂ.ಪಿ.ಪ್ರಕಾಶ್‌ ಅವರನ್ನು ಜೊತೆಯಲ್ಲಿ ಪ್ರಯಾಣಿಸುವಂತೆ ದ್ವಾರಕೀಶ್‌ ಕೇಳಿದಾಗ ಅವರನ್ನು ಬೈದು ಕಳಿಸಿದ್ದರಂತೆ. ಅದೇ ವೇಳೆಗೆ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿ ಬಂದಿದ್ದರು. ಸಿ

ದ್ದರಾಮಯ್ಯ ಹಾಗೂ ಕನ್ನಡ ಕಾವಲು ಸಮಿತಿ ಅಧಯಕ್ಷರೊಬ್ಬರು ದ್ವಾರಕೀಶ್‌ ಜೊತೆ ಹೆಲಿಕಾಫ್ಟರ್‌ನಲ್ಲಿ ಪ್ರಯಾಣಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ಮೊಟ್ಟ ಮೊದಲ ಬಾರಿಗೆ ಹೆಲಿಕಾಫ್ಟರ್‌ ಹತ್ತಿದ್ದು ಎಂದು ದ್ವಾರಕೀಶ್‌ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago