ಮೈಸೂರು

ದ್ವಾರಕೀಶ್‌ ಜೊತೆ ಸಿದ್ದರಾಮಯ್ಯ ಮೊದಲ ಹೆಲಿಕಾಫ್ಟರ್‌ ಪ್ರಯಾಣ !

ಮೈಸೂರು : ಚಿತ್ರನಟ ದ್ವಾರಕೀಶ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ನೇಹ ಪ್ರಾರಂಭವಾಗಿದ್ದು ಒಂದು ಹೆಲಿಕಾಫ್ಟರ್‌ ಪ್ರಯಾಣದಿಂದ.

ದ್ವಾರಕೀಶ್‌ ಹಾಗೂ ಸಿದ್ದರಾಮಯ್ಯ ಅವರ ಒಡನಾಟದ ಬಗ್ಗೆ ಈ ಹಿಂದೆ ದ್ವಾರಕೀಶ್‌ ನೀಡಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು.

ಮೈಸೂರಿನ ಹೆಸರಾಂತ ಪ್ರೀಮಿಯರ್‌ ಸ್ಟೂಡಿಯೋದಲ್ಲಿ ಕನ್ನಡದ ಹೆಸರಾಂತ ನಟಿ ʼಲೀಲಾವತಿʼ ಅವರ ಪುತ್ರ ʼವಿನೋದ್‌ ರಾಜ್‌ಕುಮಾರ್‌ʼ ಅವರ ಮೊಟ್ಟಮೊದಲ ಚಿತ್ರ ʼಡ್ಯಾಂಸ್‌ ರಾಜ ಡ್ಯಾಂಸ್‌ʼ ಚಿತ್ರದ ಶೂಟಿಂಗ್‌ಗಾಗಿ ಬೃಹತ್‌ ಸೆಟ್‌ ಒಂದನ್ನು ಹಾಕಲಾಗಿತ್ತು.

ಇದೇ ವೇಳೆ, ಚಿತ್ರಕ್ಕಾಗಿ ಹೆಲಿಕಾಫ್ಟರ್‌ ಅಗತ್ಯವಿತ್ತು. ಅದೇ ಸಂಸರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗ್ಡೆ ಅವರ ಆಪ್ತ ಸಹಾಯಕ ರಾಮಪ್ಪ ಅವರು ಹೆಲಿಕಾಫ್ಟರ್‌ ಕೊಡಿಸುವಲ್ಲಿ ಸಹಾಯ ಮಾಡಿದ್ದರು.

ಆದರೆ ಸರ್ಕಾರಿ ಹೆಲಿಕಾಫ್ಟರ್‌ ಬಳಸುವುದಾದರೆ, ಅದರಲ್ಲಿ ಕ್ಯಾಬಿನೆಟ್‌ ದರ್ಜೆಯ ವ್ಯಕ್ತಿ ಒಬ್ಬರು ಜೊತೆಯಲ್ಲಿ ಪ್ರಯಾಣಿಸಬೇಕು ಎಂದು ಮುಖ್ಯಮಂತ್ರಿ ಹೆಗ್ಡೆ ಅವರು ಶರತ್ತು ವಿಧಿಸಿದ್ದರು.

ಅಂದಿನ ವಾರ್ತ ಸಚಿವರಾಗಿದ್ದ ಎಂ.ಪಿ.ಪ್ರಕಾಶ್‌ ಅವರನ್ನು ಜೊತೆಯಲ್ಲಿ ಪ್ರಯಾಣಿಸುವಂತೆ ದ್ವಾರಕೀಶ್‌ ಕೇಳಿದಾಗ ಅವರನ್ನು ಬೈದು ಕಳಿಸಿದ್ದರಂತೆ. ಅದೇ ವೇಳೆಗೆ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿ ಬಂದಿದ್ದರು. ಸಿ

ದ್ದರಾಮಯ್ಯ ಹಾಗೂ ಕನ್ನಡ ಕಾವಲು ಸಮಿತಿ ಅಧಯಕ್ಷರೊಬ್ಬರು ದ್ವಾರಕೀಶ್‌ ಜೊತೆ ಹೆಲಿಕಾಫ್ಟರ್‌ನಲ್ಲಿ ಪ್ರಯಾಣಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ಮೊಟ್ಟ ಮೊದಲ ಬಾರಿಗೆ ಹೆಲಿಕಾಫ್ಟರ್‌ ಹತ್ತಿದ್ದು ಎಂದು ದ್ವಾರಕೀಶ್‌ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

6 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

7 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

7 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

7 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

7 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

7 hours ago