ಮೈಸೂರು

ದ್ವಾರಕೀಶ್‌ ಜೊತೆ ಸಿದ್ದರಾಮಯ್ಯ ಮೊದಲ ಹೆಲಿಕಾಫ್ಟರ್‌ ಪ್ರಯಾಣ !

ಮೈಸೂರು : ಚಿತ್ರನಟ ದ್ವಾರಕೀಶ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ನೇಹ ಪ್ರಾರಂಭವಾಗಿದ್ದು ಒಂದು ಹೆಲಿಕಾಫ್ಟರ್‌ ಪ್ರಯಾಣದಿಂದ.

ದ್ವಾರಕೀಶ್‌ ಹಾಗೂ ಸಿದ್ದರಾಮಯ್ಯ ಅವರ ಒಡನಾಟದ ಬಗ್ಗೆ ಈ ಹಿಂದೆ ದ್ವಾರಕೀಶ್‌ ನೀಡಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು.

ಮೈಸೂರಿನ ಹೆಸರಾಂತ ಪ್ರೀಮಿಯರ್‌ ಸ್ಟೂಡಿಯೋದಲ್ಲಿ ಕನ್ನಡದ ಹೆಸರಾಂತ ನಟಿ ʼಲೀಲಾವತಿʼ ಅವರ ಪುತ್ರ ʼವಿನೋದ್‌ ರಾಜ್‌ಕುಮಾರ್‌ʼ ಅವರ ಮೊಟ್ಟಮೊದಲ ಚಿತ್ರ ʼಡ್ಯಾಂಸ್‌ ರಾಜ ಡ್ಯಾಂಸ್‌ʼ ಚಿತ್ರದ ಶೂಟಿಂಗ್‌ಗಾಗಿ ಬೃಹತ್‌ ಸೆಟ್‌ ಒಂದನ್ನು ಹಾಕಲಾಗಿತ್ತು.

ಇದೇ ವೇಳೆ, ಚಿತ್ರಕ್ಕಾಗಿ ಹೆಲಿಕಾಫ್ಟರ್‌ ಅಗತ್ಯವಿತ್ತು. ಅದೇ ಸಂಸರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗ್ಡೆ ಅವರ ಆಪ್ತ ಸಹಾಯಕ ರಾಮಪ್ಪ ಅವರು ಹೆಲಿಕಾಫ್ಟರ್‌ ಕೊಡಿಸುವಲ್ಲಿ ಸಹಾಯ ಮಾಡಿದ್ದರು.

ಆದರೆ ಸರ್ಕಾರಿ ಹೆಲಿಕಾಫ್ಟರ್‌ ಬಳಸುವುದಾದರೆ, ಅದರಲ್ಲಿ ಕ್ಯಾಬಿನೆಟ್‌ ದರ್ಜೆಯ ವ್ಯಕ್ತಿ ಒಬ್ಬರು ಜೊತೆಯಲ್ಲಿ ಪ್ರಯಾಣಿಸಬೇಕು ಎಂದು ಮುಖ್ಯಮಂತ್ರಿ ಹೆಗ್ಡೆ ಅವರು ಶರತ್ತು ವಿಧಿಸಿದ್ದರು.

ಅಂದಿನ ವಾರ್ತ ಸಚಿವರಾಗಿದ್ದ ಎಂ.ಪಿ.ಪ್ರಕಾಶ್‌ ಅವರನ್ನು ಜೊತೆಯಲ್ಲಿ ಪ್ರಯಾಣಿಸುವಂತೆ ದ್ವಾರಕೀಶ್‌ ಕೇಳಿದಾಗ ಅವರನ್ನು ಬೈದು ಕಳಿಸಿದ್ದರಂತೆ. ಅದೇ ವೇಳೆಗೆ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿ ಬಂದಿದ್ದರು. ಸಿ

ದ್ದರಾಮಯ್ಯ ಹಾಗೂ ಕನ್ನಡ ಕಾವಲು ಸಮಿತಿ ಅಧಯಕ್ಷರೊಬ್ಬರು ದ್ವಾರಕೀಶ್‌ ಜೊತೆ ಹೆಲಿಕಾಫ್ಟರ್‌ನಲ್ಲಿ ಪ್ರಯಾಣಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ಮೊಟ್ಟ ಮೊದಲ ಬಾರಿಗೆ ಹೆಲಿಕಾಫ್ಟರ್‌ ಹತ್ತಿದ್ದು ಎಂದು ದ್ವಾರಕೀಶ್‌ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago