ಮೈಸೂರು

ಇ-ಖಾತೆ ವಿತರಣೆ | ರಾಜ್ಯದಲ್ಲಿ ಮೈಸೂರಿಗೆ ಎರಡನೇ ಸ್ಥಾನ : ಶಾಸಕ ಶ್ರೀವತ್ಸ

ಮಹಾನಗರ ಪಾಲಿಕೆ ವಲಯ ಕಚೇರಿ-1 ಮತ್ತು 2ರಲ್ಲಿ ಇ-ಖಾತೆ ಹಂಚಿಕೆ

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆ ಕಚೇರಿ-1 ಮತ್ತು 2ರಲ್ಲಿ ಶಾಸಕ ಶ್ರೀವತ್ಸ ಅವರು ೨೫೦ಕ್ಕೂ ಹೆಚ್ಚು ಮಂದಿಗೆ ಇ-ಖಾತೆ ಪತ್ರ ಹಂಚಿಕೆ ಮಾಡಿದರು.

ನಗರದ ವಲಯ ಕಚೇರಿ-1ರಲ್ಲಿ ಇ-ಖಾತೆ ಹಂಚಿಕೆ ಮಾಡಿ ಮಾತನಾಡಿದ ಅವರು, ಆಯುಕ್ತ ತನ್ವೀರ್ ಅವರು ಆಯುಕ್ತರಾಗಿ ಬಂದ ನಂತರ ಸಾರ್ವಜನಿಕರಿಗೆ ಇ-ಖಾತೆ ಹಂಚಿಕೆಯ ವೇಗ ಹೆಚ್ಚಾಗಿದ್ದು, ವಲಯ ಕಚೇರಿಗಳ ಆಯುಕ್ತರುಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟು ಖಾತೆ ವಿತರಣೆ ಮಾಡಿಸುತ್ತಿರುವುದರಿಂದ ರಾಜ್ಯದಲ್ಲಿ ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದು ಕೊಂಡಿದೆ ಎಂದು ಹೇಳಿದರು.

ಆಯುಕ್ತ ತನ್ವೀರ್ ಅವರು ಮಾತನಾಡಿ, ವಲಯ ಕಚೇರಿ-1ರ ಸಹಾಯಕ ಆಯುಕ್ತರು 7/10 ದಿನಗಳಲ್ಲಿ ಇ-ಖಾತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ದಾಖಲೆ ನೀಡಿ ಸಾರ್ವಜನಿಕರು ಸಹಕರಿಸಿ. ಈಗಾಗಲೇ 45 ದಿನಗಳಲ್ಲಿ 9 ಸಾವಿರ ಇ-ಖಾತೆ ವಿತರಿಸಲಾಗಿದೆ. ಈ ವಲಯದಲ್ಲಿ ಪ್ರತೀ ತಿಂಗಳು 800/900 ಖಾತೆ ವಿತರಿಸುವ ಮೂಲಕ ಗುರಿ ಮುಟ್ಟಬೇಕಿದೆ. ಸಾರ್ವಜನಿಕರು ದಾಖಲೆ ನೀಡಿ ಪಡೆದುಕೊಳ್ಳಿ ಎಂದರು‌
ಸ್ವಚ್ಛ ಸರ್ವೇಕ್ಷಣ್ ನಡೆಯುತ್ತಿದೆ. ಈ ಸಾಲಿನಲ್ಲಿ ಮೈಸೂರು ನಗರ ೧ನೇ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದೆ. ಸಾರ್ವಜನಿಕರು ನಿಮ್ಮ ದೂರವಾಣಿಗಳ ಮೂಲಕ ಈ ವಿಚಾರವಾಗಿ ಹೆಚ್ಚು ಪ್ರಚಾರ ಮಾಡುವ ಮೂಲಕ ಸಹಕರಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪ ಆಯುಕ್ತ(ಕಂದಾಯ) ಸೋಮಶೇಖರ್, ವಲಯ-೧ರ ಸಹಾಯಕ ಆಯುಕ್ತ ಮನನ ಮಂಜುನಾಥ ರೆಡ್ಡಿ, ಕಂದಾಯಾಧಿಜಾರಿ ಸ್ವರ್ಣಲತಾ, ಸಹಾಯಕ ಕಂದಾಯಾಧಿಕಾರಿ ಪ್ರತಾಪ್ ಮುಂಯಾದವರು ಉಪಸ್ಥಿತರಿದ್ದರು.

ವಲಯ ಕಚೇರಿ -2ರಲ್ಲಿ 100 ಇ-ಖಾತೆ ವಿತರಣೆ:
ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-2ರಲ್ಲಿ ಶಾಸಕ ಶ್ರೀವತ್ಸ ಈ ಭಾಗದ 100 ಮಂದಿ ಸಾರ್ವಜನಿಕರಿಗೆ ಇ- ವಿತರಿಸಿದರು.
ನಂತರ ಮಾತನಾಡಿದ ಅವರು, ಅತ್ಯಂತ ಸಾಧಾರಣವಾದ ನಿಮ್ಮಲ್ಲಿ ಈಗಾಗಲೇ ಇರುವ ದಾಖಲಾತಿಗಳಾದ ಟೈಟಲ್ ಡೀಡ್, ರಿಜಿಸ್ಟ್ರೇಷನ್ ಪ್ರತಿ, ಇಸಿ, ಆಸ್ತಿಯ ಛಾಯಾಚಿತ್ರ, ಪಾಸ್ ಪೋರ್ಟ್ ಫೋಟೋ, ತೆರಿಗೆ ಪಾವತಿಸಿರುವ ರಸೀದಿ, ಐಡಿ ದಾಖಲೆ ಇವಿಷ್ಟು ದಾಖಲೆ ನೀಡಿ ಇ-ಖಾತೆ ಪಡೆದುಕೊಳ್ಳಿ ಎಂದು ಹೇಳಿದರು.

ಈ ವೇಳೆ ವಲಯ ಕಚೇರಿ-2ರ ವಲಯ ಆಯುಕ್ತ ನಾಗರಾಜು, ಸಹಾಯಕ ಕಂದಾಯಾಧಿಕಾರಿ ಬೆಟ್ಟಸಾಮಯ್ಯ, ಜಂದಾಯ ನಿರೀಕ್ಷಕ ಡಿ.ಎಸ್. ಅಶೋಕ್ ಪಾಲಿಕೆ ಮಾಜಿ ಸದಸ್ಯೆ ಚಂಪಕ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

7 mins ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

1 hour ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

1 hour ago

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

2 hours ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

3 hours ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

4 hours ago