ಮಹಾನಗರ ಪಾಲಿಕೆ ವಲಯ ಕಚೇರಿ-1 ಮತ್ತು 2ರಲ್ಲಿ ಇ-ಖಾತೆ ಹಂಚಿಕೆ
ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆ ಕಚೇರಿ-1 ಮತ್ತು 2ರಲ್ಲಿ ಶಾಸಕ ಶ್ರೀವತ್ಸ ಅವರು ೨೫೦ಕ್ಕೂ ಹೆಚ್ಚು ಮಂದಿಗೆ ಇ-ಖಾತೆ ಪತ್ರ ಹಂಚಿಕೆ ಮಾಡಿದರು.
ನಗರದ ವಲಯ ಕಚೇರಿ-1ರಲ್ಲಿ ಇ-ಖಾತೆ ಹಂಚಿಕೆ ಮಾಡಿ ಮಾತನಾಡಿದ ಅವರು, ಆಯುಕ್ತ ತನ್ವೀರ್ ಅವರು ಆಯುಕ್ತರಾಗಿ ಬಂದ ನಂತರ ಸಾರ್ವಜನಿಕರಿಗೆ ಇ-ಖಾತೆ ಹಂಚಿಕೆಯ ವೇಗ ಹೆಚ್ಚಾಗಿದ್ದು, ವಲಯ ಕಚೇರಿಗಳ ಆಯುಕ್ತರುಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟು ಖಾತೆ ವಿತರಣೆ ಮಾಡಿಸುತ್ತಿರುವುದರಿಂದ ರಾಜ್ಯದಲ್ಲಿ ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದು ಕೊಂಡಿದೆ ಎಂದು ಹೇಳಿದರು.
ಆಯುಕ್ತ ತನ್ವೀರ್ ಅವರು ಮಾತನಾಡಿ, ವಲಯ ಕಚೇರಿ-1ರ ಸಹಾಯಕ ಆಯುಕ್ತರು 7/10 ದಿನಗಳಲ್ಲಿ ಇ-ಖಾತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ದಾಖಲೆ ನೀಡಿ ಸಾರ್ವಜನಿಕರು ಸಹಕರಿಸಿ. ಈಗಾಗಲೇ 45 ದಿನಗಳಲ್ಲಿ 9 ಸಾವಿರ ಇ-ಖಾತೆ ವಿತರಿಸಲಾಗಿದೆ. ಈ ವಲಯದಲ್ಲಿ ಪ್ರತೀ ತಿಂಗಳು 800/900 ಖಾತೆ ವಿತರಿಸುವ ಮೂಲಕ ಗುರಿ ಮುಟ್ಟಬೇಕಿದೆ. ಸಾರ್ವಜನಿಕರು ದಾಖಲೆ ನೀಡಿ ಪಡೆದುಕೊಳ್ಳಿ ಎಂದರು
ಸ್ವಚ್ಛ ಸರ್ವೇಕ್ಷಣ್ ನಡೆಯುತ್ತಿದೆ. ಈ ಸಾಲಿನಲ್ಲಿ ಮೈಸೂರು ನಗರ ೧ನೇ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದೆ. ಸಾರ್ವಜನಿಕರು ನಿಮ್ಮ ದೂರವಾಣಿಗಳ ಮೂಲಕ ಈ ವಿಚಾರವಾಗಿ ಹೆಚ್ಚು ಪ್ರಚಾರ ಮಾಡುವ ಮೂಲಕ ಸಹಕರಿಸಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ಆಯುಕ್ತ(ಕಂದಾಯ) ಸೋಮಶೇಖರ್, ವಲಯ-೧ರ ಸಹಾಯಕ ಆಯುಕ್ತ ಮನನ ಮಂಜುನಾಥ ರೆಡ್ಡಿ, ಕಂದಾಯಾಧಿಜಾರಿ ಸ್ವರ್ಣಲತಾ, ಸಹಾಯಕ ಕಂದಾಯಾಧಿಕಾರಿ ಪ್ರತಾಪ್ ಮುಂಯಾದವರು ಉಪಸ್ಥಿತರಿದ್ದರು.
ವಲಯ ಕಚೇರಿ -2ರಲ್ಲಿ 100 ಇ-ಖಾತೆ ವಿತರಣೆ:
ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-2ರಲ್ಲಿ ಶಾಸಕ ಶ್ರೀವತ್ಸ ಈ ಭಾಗದ 100 ಮಂದಿ ಸಾರ್ವಜನಿಕರಿಗೆ ಇ- ವಿತರಿಸಿದರು.
ನಂತರ ಮಾತನಾಡಿದ ಅವರು, ಅತ್ಯಂತ ಸಾಧಾರಣವಾದ ನಿಮ್ಮಲ್ಲಿ ಈಗಾಗಲೇ ಇರುವ ದಾಖಲಾತಿಗಳಾದ ಟೈಟಲ್ ಡೀಡ್, ರಿಜಿಸ್ಟ್ರೇಷನ್ ಪ್ರತಿ, ಇಸಿ, ಆಸ್ತಿಯ ಛಾಯಾಚಿತ್ರ, ಪಾಸ್ ಪೋರ್ಟ್ ಫೋಟೋ, ತೆರಿಗೆ ಪಾವತಿಸಿರುವ ರಸೀದಿ, ಐಡಿ ದಾಖಲೆ ಇವಿಷ್ಟು ದಾಖಲೆ ನೀಡಿ ಇ-ಖಾತೆ ಪಡೆದುಕೊಳ್ಳಿ ಎಂದು ಹೇಳಿದರು.
ಈ ವೇಳೆ ವಲಯ ಕಚೇರಿ-2ರ ವಲಯ ಆಯುಕ್ತ ನಾಗರಾಜು, ಸಹಾಯಕ ಕಂದಾಯಾಧಿಕಾರಿ ಬೆಟ್ಟಸಾಮಯ್ಯ, ಜಂದಾಯ ನಿರೀಕ್ಷಕ ಡಿ.ಎಸ್. ಅಶೋಕ್ ಪಾಲಿಕೆ ಮಾಜಿ ಸದಸ್ಯೆ ಚಂಪಕ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…