ಮೈಸೂರು

ಇ-ಖಾತೆ ವಿತರಣೆ | ರಾಜ್ಯದಲ್ಲಿ ಮೈಸೂರಿಗೆ ಎರಡನೇ ಸ್ಥಾನ : ಶಾಸಕ ಶ್ರೀವತ್ಸ

ಮಹಾನಗರ ಪಾಲಿಕೆ ವಲಯ ಕಚೇರಿ-1 ಮತ್ತು 2ರಲ್ಲಿ ಇ-ಖಾತೆ ಹಂಚಿಕೆ

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆ ಕಚೇರಿ-1 ಮತ್ತು 2ರಲ್ಲಿ ಶಾಸಕ ಶ್ರೀವತ್ಸ ಅವರು ೨೫೦ಕ್ಕೂ ಹೆಚ್ಚು ಮಂದಿಗೆ ಇ-ಖಾತೆ ಪತ್ರ ಹಂಚಿಕೆ ಮಾಡಿದರು.

ನಗರದ ವಲಯ ಕಚೇರಿ-1ರಲ್ಲಿ ಇ-ಖಾತೆ ಹಂಚಿಕೆ ಮಾಡಿ ಮಾತನಾಡಿದ ಅವರು, ಆಯುಕ್ತ ತನ್ವೀರ್ ಅವರು ಆಯುಕ್ತರಾಗಿ ಬಂದ ನಂತರ ಸಾರ್ವಜನಿಕರಿಗೆ ಇ-ಖಾತೆ ಹಂಚಿಕೆಯ ವೇಗ ಹೆಚ್ಚಾಗಿದ್ದು, ವಲಯ ಕಚೇರಿಗಳ ಆಯುಕ್ತರುಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟು ಖಾತೆ ವಿತರಣೆ ಮಾಡಿಸುತ್ತಿರುವುದರಿಂದ ರಾಜ್ಯದಲ್ಲಿ ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದು ಕೊಂಡಿದೆ ಎಂದು ಹೇಳಿದರು.

ಆಯುಕ್ತ ತನ್ವೀರ್ ಅವರು ಮಾತನಾಡಿ, ವಲಯ ಕಚೇರಿ-1ರ ಸಹಾಯಕ ಆಯುಕ್ತರು 7/10 ದಿನಗಳಲ್ಲಿ ಇ-ಖಾತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ದಾಖಲೆ ನೀಡಿ ಸಾರ್ವಜನಿಕರು ಸಹಕರಿಸಿ. ಈಗಾಗಲೇ 45 ದಿನಗಳಲ್ಲಿ 9 ಸಾವಿರ ಇ-ಖಾತೆ ವಿತರಿಸಲಾಗಿದೆ. ಈ ವಲಯದಲ್ಲಿ ಪ್ರತೀ ತಿಂಗಳು 800/900 ಖಾತೆ ವಿತರಿಸುವ ಮೂಲಕ ಗುರಿ ಮುಟ್ಟಬೇಕಿದೆ. ಸಾರ್ವಜನಿಕರು ದಾಖಲೆ ನೀಡಿ ಪಡೆದುಕೊಳ್ಳಿ ಎಂದರು‌
ಸ್ವಚ್ಛ ಸರ್ವೇಕ್ಷಣ್ ನಡೆಯುತ್ತಿದೆ. ಈ ಸಾಲಿನಲ್ಲಿ ಮೈಸೂರು ನಗರ ೧ನೇ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದೆ. ಸಾರ್ವಜನಿಕರು ನಿಮ್ಮ ದೂರವಾಣಿಗಳ ಮೂಲಕ ಈ ವಿಚಾರವಾಗಿ ಹೆಚ್ಚು ಪ್ರಚಾರ ಮಾಡುವ ಮೂಲಕ ಸಹಕರಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪ ಆಯುಕ್ತ(ಕಂದಾಯ) ಸೋಮಶೇಖರ್, ವಲಯ-೧ರ ಸಹಾಯಕ ಆಯುಕ್ತ ಮನನ ಮಂಜುನಾಥ ರೆಡ್ಡಿ, ಕಂದಾಯಾಧಿಜಾರಿ ಸ್ವರ್ಣಲತಾ, ಸಹಾಯಕ ಕಂದಾಯಾಧಿಕಾರಿ ಪ್ರತಾಪ್ ಮುಂಯಾದವರು ಉಪಸ್ಥಿತರಿದ್ದರು.

ವಲಯ ಕಚೇರಿ -2ರಲ್ಲಿ 100 ಇ-ಖಾತೆ ವಿತರಣೆ:
ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-2ರಲ್ಲಿ ಶಾಸಕ ಶ್ರೀವತ್ಸ ಈ ಭಾಗದ 100 ಮಂದಿ ಸಾರ್ವಜನಿಕರಿಗೆ ಇ- ವಿತರಿಸಿದರು.
ನಂತರ ಮಾತನಾಡಿದ ಅವರು, ಅತ್ಯಂತ ಸಾಧಾರಣವಾದ ನಿಮ್ಮಲ್ಲಿ ಈಗಾಗಲೇ ಇರುವ ದಾಖಲಾತಿಗಳಾದ ಟೈಟಲ್ ಡೀಡ್, ರಿಜಿಸ್ಟ್ರೇಷನ್ ಪ್ರತಿ, ಇಸಿ, ಆಸ್ತಿಯ ಛಾಯಾಚಿತ್ರ, ಪಾಸ್ ಪೋರ್ಟ್ ಫೋಟೋ, ತೆರಿಗೆ ಪಾವತಿಸಿರುವ ರಸೀದಿ, ಐಡಿ ದಾಖಲೆ ಇವಿಷ್ಟು ದಾಖಲೆ ನೀಡಿ ಇ-ಖಾತೆ ಪಡೆದುಕೊಳ್ಳಿ ಎಂದು ಹೇಳಿದರು.

ಈ ವೇಳೆ ವಲಯ ಕಚೇರಿ-2ರ ವಲಯ ಆಯುಕ್ತ ನಾಗರಾಜು, ಸಹಾಯಕ ಕಂದಾಯಾಧಿಕಾರಿ ಬೆಟ್ಟಸಾಮಯ್ಯ, ಜಂದಾಯ ನಿರೀಕ್ಷಕ ಡಿ.ಎಸ್. ಅಶೋಕ್ ಪಾಲಿಕೆ ಮಾಜಿ ಸದಸ್ಯೆ ಚಂಪಕ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

58 seconds ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

3 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

5 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

16 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

19 hours ago