ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ.
ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ ನೋಂದಣಿ ಪ್ರಾರಂಭವಾಗಿದ್ದು, ಉದ್ಯೋಗ ಚೀಟಿ ಹೊಂದಿರುವ ಕುಟುಂಬದವರು ಅಗತ್ಯ ದಾಖಲಾತಿಯೊಂದಿಗೆ ಅಪ್ಡೇಟ್ ಮಾಡಿಸಬಹುದಾಗಿದೆ.
ಇದನ್ನು ಓದಿ : ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರ ಉದ್ಘಾಟನೆ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕೂಲಿಕಾರರ ಹಾಜರಾತಿಯನ್ನು ಎನ್.ಎಂ.ಎಂ.ಎಸ್ ಮೂಲಕ ತೆಗೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇ-ಕೆವೈಸಿ ಅಪ್ಡೇಟ್ ಅಗತ್ಯವಿರುತ್ತದೆ.
ಕೂಲಿಕಾರ್ಮಿಕರ ಹಾಜರಾತಿಯನ್ನು ತೆಗೆದುಕೊಳ್ಳುವಾಗ ಹಾಗೂ ಹಣವನ್ನು ಅವರ ಖಾತೆಗೆ ಜಮೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಿಸುವುದು ಸಹಕಾರಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…