ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ.
ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ ನೋಂದಣಿ ಪ್ರಾರಂಭವಾಗಿದ್ದು, ಉದ್ಯೋಗ ಚೀಟಿ ಹೊಂದಿರುವ ಕುಟುಂಬದವರು ಅಗತ್ಯ ದಾಖಲಾತಿಯೊಂದಿಗೆ ಅಪ್ಡೇಟ್ ಮಾಡಿಸಬಹುದಾಗಿದೆ.
ಇದನ್ನು ಓದಿ : ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರ ಉದ್ಘಾಟನೆ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕೂಲಿಕಾರರ ಹಾಜರಾತಿಯನ್ನು ಎನ್.ಎಂ.ಎಂ.ಎಸ್ ಮೂಲಕ ತೆಗೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇ-ಕೆವೈಸಿ ಅಪ್ಡೇಟ್ ಅಗತ್ಯವಿರುತ್ತದೆ.
ಕೂಲಿಕಾರ್ಮಿಕರ ಹಾಜರಾತಿಯನ್ನು ತೆಗೆದುಕೊಳ್ಳುವಾಗ ಹಾಗೂ ಹಣವನ್ನು ಅವರ ಖಾತೆಗೆ ಜಮೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಿಸುವುದು ಸಹಕಾರಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…