ಮೈಸೂರು

ಸಹಕಾರ ಕ್ಷೇತ್ರ ಪ್ರಗತಿಯಾದರೆ ಆರ್ಥಿಕ ಪ್ರಗತಿಗೆ ಸಾಧ್ಯ: ಶಾಸಕ ಜಿಟಿಡಿ

ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್‌ವೆನ್ಷನ್ ಹಾಲ್‌ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ನಿರ್ದೇಶಕರು ಬ್ಯಾಂಕಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರಿಂದಾಗಿ ಸಂಘ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.

ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ,ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.ಸಹಕಾರ ಕ್ಷೇತ್ರದ ಬ್ಯಾಂಕ್,ಸಂಘಗಳುಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರಿಗೆ ಸಾಲಸೌಲಭ್ಯ ನೀಡಲು ಅನುಕೂಲವಾಗಲಿದೆ ಎಂದರು. ಸರ್ಕಾರಿ ಬ್ಯಾಂಕ್‌ಗಳಿಂದ ತರಕಾರಿ,ಹಣ್ಣು ವ್ಯಾಪಾರ ಮಾಡುವವರು, ಗುಡಿ ಕೈಗಾರಿಕೆಗಳನ್ನು ಮಾಡುವವರಿಗೆ ಸಾಲ ಸೌಲಭ್ಯ ನೀಡುವುದಿಲ್ಲ. ಅಂತಹವರನ್ನು ಸದಸ್ಯರನ್ನಾಗಿ ಮಾಡಿಕೊಂಡು ಸಾಲಸೌಲಭ್ಯ ನೀಡಿದರೆ ಅವರ ಆರ್ಥಿಕ ಪ್ರಗತಿಗೆ ಅನುಕೂಲವಾಗಲಿದೆ.

ಖಾಸಗಿ ಸಾಲದಿಂದ ಬಂಡವಾಳ ಹಾಕಿಸದೆ ಸಹಕಾರ ಸಂಘಗಳಿಂದ ಸಾಲ ಕೊಟ್ಟರೆ ಆರ್ಥಿಕವಾಗಿ ನೆರವಾಗಲಿದೆ ಎಂದರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಾಲ ಕೊಡಲಾಗುತ್ತಿಲ್ಲ. ಕೇಂದ್ರಸರ್ಕಾರವಾಗಲೀ ಅಥವಾ ರಾಜ್ಯಸರ್ಕಾರವಾಗಲೀ ಸಹಕಾರ ಸಂಘಗಳಿಗೆ ಅನುದಾನ ಕೊಡುತ್ತಿಲ್ಲ. ಶೇ.೩ರಷ್ಟು ಬಡ್ಡಿದರದಲ್ಲಿ ಸಾಲ ಕೊಡಬಹುದು ಹೊರತು ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಸಹಕಾರ ಕ್ಷೇತ್ರ ನಮ್ಮದೆಂದು ಸರ್ಕಾರ ಹೇಳಿಕೊಳ್ಳುತ್ತಿದೆಯೇ ಹೊರತು ಅನುದಾನ ಕೊಡಲು ಮುಂದಾಗುತ್ತಿಲ್ಲ ಎಂದು ಬೇಸರಿಸಿದರು.

ನನ್ನ ಬ್ಯಾಂಕ್,ಬ್ಯಾಂಕ್‌ನ ರಜತ ಮಹೋತ್ಸವವೆಂದು ಭಾವಿಸಿ ಬಂದಿರುವುದು ಸಂತೋಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ಮಾಡಿಕೊಂಡು ಬಂದಿರುವ ಕೆಲಸ,ಅನುಭವವನ್ನು ನೋಡಿದರೆ ಸಹಕಾರ ಕ್ಷೇತ್ರ ರಾಜಕೀಯ ಮತ್ತುಸರ್ಕಾರದ ಹಸ್ತಕ್ಷೇಪದಿಂದ ದೂರವಿರಬೇಕು. ಠೇವಣಿದಾರರು ಬ್ಯಾಂಕ್,ಸಂಘದ ಮೇಲೆ ವಿಶ್ವಾಸ ಇಟ್ಟು ಠೇವಣಿ ಇಡುತ್ತಾರೆ.ಸದಸ್ಯರಿಗೆ ಕಾಲಕಾಲಕ್ಕೆ ಸೌಲಭ್ಯಗಳನ್ನು ನೀಡಿದರೆ ಮತ್ತಷ್ಟು ಪ್ರಗತಿ ಹೊಂದಬಹುದು ಎಂದರು. ಅಧ್ಯಕ್ಷತೆಯನ್ನು ಶ್ರೀಶಾರದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ವಹಿಸಿದ್ದರು.

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್,ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಕೆ.ವೆಂಕಟಕೃಷ್ಣ ಭಟ್,ನಿರ್ದೇಶಕರಾದ ಎಸ್.ವೆಂಕಟೇಶ್, ಟಿ.ಎನ್.ರಾಮದಾಸ್, ಎಂ.ಮಹೇಂದ್ರ,ಜೆ.ಎಸ್.ಗೋಪಾಲಕೃಷ್ಣ, ಕೆ.ಆರ್.ನಟರಾಜು, ಎಚ್.ಎಸ್.ಲಲಿತಾ ನಾಗರಾಜ್, ವೈ.ಕೆ.ರೇವತಿ, ಎಂ.ಆರ್.ಯೋಗೀಶ್, ಎಂ.ಗೋಪಾಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ಕೃಷ್ಣಮೂರ್ತಿ ಹಾಜರಿದ್ದರು. ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

6 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

8 hours ago