ಮೈಸೂರು

ಸಹಕಾರ ಕ್ಷೇತ್ರ ಪ್ರಗತಿಯಾದರೆ ಆರ್ಥಿಕ ಪ್ರಗತಿಗೆ ಸಾಧ್ಯ: ಶಾಸಕ ಜಿಟಿಡಿ

ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್‌ವೆನ್ಷನ್ ಹಾಲ್‌ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ನಿರ್ದೇಶಕರು ಬ್ಯಾಂಕಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರಿಂದಾಗಿ ಸಂಘ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.

ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ,ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.ಸಹಕಾರ ಕ್ಷೇತ್ರದ ಬ್ಯಾಂಕ್,ಸಂಘಗಳುಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರಿಗೆ ಸಾಲಸೌಲಭ್ಯ ನೀಡಲು ಅನುಕೂಲವಾಗಲಿದೆ ಎಂದರು. ಸರ್ಕಾರಿ ಬ್ಯಾಂಕ್‌ಗಳಿಂದ ತರಕಾರಿ,ಹಣ್ಣು ವ್ಯಾಪಾರ ಮಾಡುವವರು, ಗುಡಿ ಕೈಗಾರಿಕೆಗಳನ್ನು ಮಾಡುವವರಿಗೆ ಸಾಲ ಸೌಲಭ್ಯ ನೀಡುವುದಿಲ್ಲ. ಅಂತಹವರನ್ನು ಸದಸ್ಯರನ್ನಾಗಿ ಮಾಡಿಕೊಂಡು ಸಾಲಸೌಲಭ್ಯ ನೀಡಿದರೆ ಅವರ ಆರ್ಥಿಕ ಪ್ರಗತಿಗೆ ಅನುಕೂಲವಾಗಲಿದೆ.

ಖಾಸಗಿ ಸಾಲದಿಂದ ಬಂಡವಾಳ ಹಾಕಿಸದೆ ಸಹಕಾರ ಸಂಘಗಳಿಂದ ಸಾಲ ಕೊಟ್ಟರೆ ಆರ್ಥಿಕವಾಗಿ ನೆರವಾಗಲಿದೆ ಎಂದರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಾಲ ಕೊಡಲಾಗುತ್ತಿಲ್ಲ. ಕೇಂದ್ರಸರ್ಕಾರವಾಗಲೀ ಅಥವಾ ರಾಜ್ಯಸರ್ಕಾರವಾಗಲೀ ಸಹಕಾರ ಸಂಘಗಳಿಗೆ ಅನುದಾನ ಕೊಡುತ್ತಿಲ್ಲ. ಶೇ.೩ರಷ್ಟು ಬಡ್ಡಿದರದಲ್ಲಿ ಸಾಲ ಕೊಡಬಹುದು ಹೊರತು ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಸಹಕಾರ ಕ್ಷೇತ್ರ ನಮ್ಮದೆಂದು ಸರ್ಕಾರ ಹೇಳಿಕೊಳ್ಳುತ್ತಿದೆಯೇ ಹೊರತು ಅನುದಾನ ಕೊಡಲು ಮುಂದಾಗುತ್ತಿಲ್ಲ ಎಂದು ಬೇಸರಿಸಿದರು.

ನನ್ನ ಬ್ಯಾಂಕ್,ಬ್ಯಾಂಕ್‌ನ ರಜತ ಮಹೋತ್ಸವವೆಂದು ಭಾವಿಸಿ ಬಂದಿರುವುದು ಸಂತೋಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ಮಾಡಿಕೊಂಡು ಬಂದಿರುವ ಕೆಲಸ,ಅನುಭವವನ್ನು ನೋಡಿದರೆ ಸಹಕಾರ ಕ್ಷೇತ್ರ ರಾಜಕೀಯ ಮತ್ತುಸರ್ಕಾರದ ಹಸ್ತಕ್ಷೇಪದಿಂದ ದೂರವಿರಬೇಕು. ಠೇವಣಿದಾರರು ಬ್ಯಾಂಕ್,ಸಂಘದ ಮೇಲೆ ವಿಶ್ವಾಸ ಇಟ್ಟು ಠೇವಣಿ ಇಡುತ್ತಾರೆ.ಸದಸ್ಯರಿಗೆ ಕಾಲಕಾಲಕ್ಕೆ ಸೌಲಭ್ಯಗಳನ್ನು ನೀಡಿದರೆ ಮತ್ತಷ್ಟು ಪ್ರಗತಿ ಹೊಂದಬಹುದು ಎಂದರು. ಅಧ್ಯಕ್ಷತೆಯನ್ನು ಶ್ರೀಶಾರದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ವಹಿಸಿದ್ದರು.

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್,ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಕೆ.ವೆಂಕಟಕೃಷ್ಣ ಭಟ್,ನಿರ್ದೇಶಕರಾದ ಎಸ್.ವೆಂಕಟೇಶ್, ಟಿ.ಎನ್.ರಾಮದಾಸ್, ಎಂ.ಮಹೇಂದ್ರ,ಜೆ.ಎಸ್.ಗೋಪಾಲಕೃಷ್ಣ, ಕೆ.ಆರ್.ನಟರಾಜು, ಎಚ್.ಎಸ್.ಲಲಿತಾ ನಾಗರಾಜ್, ವೈ.ಕೆ.ರೇವತಿ, ಎಂ.ಆರ್.ಯೋಗೀಶ್, ಎಂ.ಗೋಪಾಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ಕೃಷ್ಣಮೂರ್ತಿ ಹಾಜರಿದ್ದರು. ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

15 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago