ಮೈಸೂರು

ಸಹಕಾರ ಕ್ಷೇತ್ರ ಪ್ರಗತಿಯಾದರೆ ಆರ್ಥಿಕ ಪ್ರಗತಿಗೆ ಸಾಧ್ಯ: ಶಾಸಕ ಜಿಟಿಡಿ

ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್‌ವೆನ್ಷನ್ ಹಾಲ್‌ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ನಿರ್ದೇಶಕರು ಬ್ಯಾಂಕಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರಿಂದಾಗಿ ಸಂಘ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.

ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ,ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.ಸಹಕಾರ ಕ್ಷೇತ್ರದ ಬ್ಯಾಂಕ್,ಸಂಘಗಳುಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರಿಗೆ ಸಾಲಸೌಲಭ್ಯ ನೀಡಲು ಅನುಕೂಲವಾಗಲಿದೆ ಎಂದರು. ಸರ್ಕಾರಿ ಬ್ಯಾಂಕ್‌ಗಳಿಂದ ತರಕಾರಿ,ಹಣ್ಣು ವ್ಯಾಪಾರ ಮಾಡುವವರು, ಗುಡಿ ಕೈಗಾರಿಕೆಗಳನ್ನು ಮಾಡುವವರಿಗೆ ಸಾಲ ಸೌಲಭ್ಯ ನೀಡುವುದಿಲ್ಲ. ಅಂತಹವರನ್ನು ಸದಸ್ಯರನ್ನಾಗಿ ಮಾಡಿಕೊಂಡು ಸಾಲಸೌಲಭ್ಯ ನೀಡಿದರೆ ಅವರ ಆರ್ಥಿಕ ಪ್ರಗತಿಗೆ ಅನುಕೂಲವಾಗಲಿದೆ.

ಖಾಸಗಿ ಸಾಲದಿಂದ ಬಂಡವಾಳ ಹಾಕಿಸದೆ ಸಹಕಾರ ಸಂಘಗಳಿಂದ ಸಾಲ ಕೊಟ್ಟರೆ ಆರ್ಥಿಕವಾಗಿ ನೆರವಾಗಲಿದೆ ಎಂದರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಾಲ ಕೊಡಲಾಗುತ್ತಿಲ್ಲ. ಕೇಂದ್ರಸರ್ಕಾರವಾಗಲೀ ಅಥವಾ ರಾಜ್ಯಸರ್ಕಾರವಾಗಲೀ ಸಹಕಾರ ಸಂಘಗಳಿಗೆ ಅನುದಾನ ಕೊಡುತ್ತಿಲ್ಲ. ಶೇ.೩ರಷ್ಟು ಬಡ್ಡಿದರದಲ್ಲಿ ಸಾಲ ಕೊಡಬಹುದು ಹೊರತು ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಸಹಕಾರ ಕ್ಷೇತ್ರ ನಮ್ಮದೆಂದು ಸರ್ಕಾರ ಹೇಳಿಕೊಳ್ಳುತ್ತಿದೆಯೇ ಹೊರತು ಅನುದಾನ ಕೊಡಲು ಮುಂದಾಗುತ್ತಿಲ್ಲ ಎಂದು ಬೇಸರಿಸಿದರು.

ನನ್ನ ಬ್ಯಾಂಕ್,ಬ್ಯಾಂಕ್‌ನ ರಜತ ಮಹೋತ್ಸವವೆಂದು ಭಾವಿಸಿ ಬಂದಿರುವುದು ಸಂತೋಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ಮಾಡಿಕೊಂಡು ಬಂದಿರುವ ಕೆಲಸ,ಅನುಭವವನ್ನು ನೋಡಿದರೆ ಸಹಕಾರ ಕ್ಷೇತ್ರ ರಾಜಕೀಯ ಮತ್ತುಸರ್ಕಾರದ ಹಸ್ತಕ್ಷೇಪದಿಂದ ದೂರವಿರಬೇಕು. ಠೇವಣಿದಾರರು ಬ್ಯಾಂಕ್,ಸಂಘದ ಮೇಲೆ ವಿಶ್ವಾಸ ಇಟ್ಟು ಠೇವಣಿ ಇಡುತ್ತಾರೆ.ಸದಸ್ಯರಿಗೆ ಕಾಲಕಾಲಕ್ಕೆ ಸೌಲಭ್ಯಗಳನ್ನು ನೀಡಿದರೆ ಮತ್ತಷ್ಟು ಪ್ರಗತಿ ಹೊಂದಬಹುದು ಎಂದರು. ಅಧ್ಯಕ್ಷತೆಯನ್ನು ಶ್ರೀಶಾರದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ವಹಿಸಿದ್ದರು.

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್,ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಕೆ.ವೆಂಕಟಕೃಷ್ಣ ಭಟ್,ನಿರ್ದೇಶಕರಾದ ಎಸ್.ವೆಂಕಟೇಶ್, ಟಿ.ಎನ್.ರಾಮದಾಸ್, ಎಂ.ಮಹೇಂದ್ರ,ಜೆ.ಎಸ್.ಗೋಪಾಲಕೃಷ್ಣ, ಕೆ.ಆರ್.ನಟರಾಜು, ಎಚ್.ಎಸ್.ಲಲಿತಾ ನಾಗರಾಜ್, ವೈ.ಕೆ.ರೇವತಿ, ಎಂ.ಆರ್.ಯೋಗೀಶ್, ಎಂ.ಗೋಪಾಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ಕೃಷ್ಣಮೂರ್ತಿ ಹಾಜರಿದ್ದರು. ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago